ಸಾಗರ ತಾಲೂಕಿನಲ್ಲಿ ಯಾವುದೇ ಅಕ್ರಮ ಜಂಬಿಟ್ಟಿಗೆ ಸಾಗಾಣಿಕೆಯನ್ನು ನಡೆಯಬಿಡುವುದಿಲ್ಲ, ಅಕ್ರಮ ಸಾಗಾಣಿಕೆದಾರರ ವಿರುದ್ಧ ಖಡಕ್ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಹಶೀಲ್ದಾರ್ ಡಾ. ಪ್ರತಿಭಾ ಆರ್ ಎಚ್ಚರಿಸಿದ್ದಾರೆ. ಇಂದು ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ ಹಿರೇ ನಲ್ಲೂರು ಗ್ರಾಮ ಪಂಚಾಯಿತಿಯ ಹಿರೇನೆಲ್ಲೂರು ಗ್ರಾಮದಲ್ಲಿ ಸರ್ವೆ ನಂಬರ್ 211 ರಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ ತೆಗೆದು ಲಾರಿಗಳಲ್ಲಿ ಸಾಗಿಸುತ್ತಿದ್ದಾಗ ಪತ್ತೆ ಹಚ್ಚಿ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ. ನೂತನವಾಗಿ ಬಂದಿರುವ ತಹಸಿಲ್ದಾರ್ ಡಾ. ಪ್ರತಿಭಾ ಆರ್ ರವರು ಸಾಗರ ತಾಲೂಕಿನಲ್ಲಿ ಯಾವುದೇ ಅಕ್ರಮ ಮರಳು ಸಾಗಾಣಿಕೆ, ಅಕ್ರಮ ಜಂಬಿಟ್ಟಿಗೆ ಸಾಗಾಣಿಕೆಯನ್ನು ತಡೆಯಲು ಕ್ರಮಕೈಗೊಂಡಿದ್ದಾರೆ.
ಸಾಗರ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ:ಅಕ್ರಮ ಜಂಬಿಟ್ಟಿಗೆ ಸಾಗಾಣಿಕೆ ಲಾರಿಗಳ ವಶ
Date:
