Wednesday, August 5, 2026
Wednesday, August 5, 2026

Shivamogga News ಅಲಗೇರಿ ಮಂಡ್ರಿಯ ಶಾಲೆಯ ಕಟ್ಟಡ ಶಿಥಿಲ: ಇಲಾಖೆ & ಜನಪ್ರತಿನಿಧಿಗಳ ಜಾಣಮೌನ.

Date:

Shivamogga News ಶಾಲೆ ಎಂದರೆ ಮಕ್ಕಳ ಭವಿಷ್ಯ ರೂಪುಗೊಳ್ಳುವ ದೇವಾಲಯ. ಆದರೆ ಶಿವಮೊಗ್ಗ ಜಿಲ್ಲೆಯ ಈ ಸರ್ಕಾರಿ ಶಾಲೆಯ ಸ್ಥಿತಿ ನೋಡಿದರೆ ಪೋಷಕರು ಮತ್ತು ಮಕ್ಕಳು ಪ್ರತಿದಿನ ಭಯದಲ್ಲೇ ಕಾಲ ಕಳೆಯುವಂತಾಗಿದೆ. ಸುಮಾರು 59 ವರ್ಷಗಳ ಹಳೆಯ ಈ ಶಾಲಾ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದರೂ ಶಿಕ್ಷಣ ಇಲಾಖೆ ಮತ್ತು ಜನಪ್ರತಿನಿಧಿಗಳು ಮಾತ್ರ ಮೌನ ವಹಿಸಿದ್ದಾರೆ.

ಇದು ಶಿವಮೊಗ್ಗ ಜಿಲ್ಲೆಯ ಅಲಗೇರಿಮಂಡ್ರಿ ಸರ್ಕಾರಿ ಪ್ರಾಥಮಿಕ ಶಾಲೆ…

ಒಮ್ಮೆ 300ಕ್ಕೂ ಹೆಚ್ಚು ವಿದ್ಯಾರ್ಥಿಗಳ ಕಲರವದಿಂದ ಕಂಗೊಳಿಸುತ್ತಿದ್ದ ಈ ಶಾಲೆ ಇಂದು ಶಿಥಿಲಗೊಂಡ ಕಟ್ಟಡದಿಂದ ಸುದ್ದಿಯಾಗಿದೆ.

ಶಾಲೆಯ ಗೋಡೆಗಳು ಬಿರುಕು ಬಿಟ್ಟು ಬಾಯಿ ತೆರೆದಂತೆ ಕಾಣುತ್ತಿವೆ. ಮೇಲ್ಚಾವಣಿ ಯಾವ ಕ್ಷಣದಲ್ಲಾದರೂ ಕುಸಿಯುವ ಭೀತಿಯಲ್ಲಿದೆ. ಕಿಟಕಿಗಳು ಹಾಗೂ ಮರದ ಹೊದಿಕೆಗಳು ಸಂಪೂರ್ಣ ಹಾಳಾಗಿದ್ದು, ಕಟ್ಟಡದ ಸ್ಥಿತಿ ಈಗಲೋ ಆಗಲೋ ಬೀಳುವಂತಾಗಿದೆ.

Shivamogga News ಸುಮಾರು 59 ವರ್ಷಗಳ ಹಳೆಯ ಈ ಶಾಲೆಯಲ್ಲಿ ಇನ್ನೂ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಕಟ್ಟಡದ ದುಸ್ಥಿತಿ ಕಂಡು ಪೋಷಕರು ಆತಂಕಕ್ಕೀಡಾಗಿದ್ದಾರೆ. ಈ ಬಾರಿಯ ಮಳೆಯ ಸಮಯದಲ್ಲಿ ಶಾಲೆ ಕುಸಿದುಬಿಡಬಹುದೆಂಬ ಭಯ ಗ್ರಾಮಸ್ಥರನ್ನು ಕಾಡುತ್ತಿದೆ.

ಶಾಲಾ ಕಟ್ಟಡ ಅಪಾಯಕಾರಿಯಾಗಿರುವ ಹಿನ್ನೆಲೆ ಅನೇಕ ಪೋಷಕರು ತಮ್ಮ ಮಕ್ಕಳನ್ನು ಬೇರೆ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಪರಿಣಾಮವಾಗಿ ಒಮ್ಮೆ 300 ಮಕ್ಕಳಿದ್ದ ಶಾಲೆಯಲ್ಲಿ ಈಗ ಕೇವಲ 60 ರಿಂದ 70 ಮಕ್ಕಳು ಮಾತ್ರ ಉಳಿದಿದ್ದಾರೆ.

ಇಷ್ಟಾದರೂ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಗ್ರಾಮಸ್ಥರು ಆರೋಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ...

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ...

S. N. Channabasappa ಶಿವಮೊಗ್ಗ ಸಾಂಸ್ಕೃತಿಕ ರಾಜಧಾನಿ ಎಂಬ ಪ್ರಸಿದ್ಧಿಗೆ ಇಲ್ಲಿನ ಸಹೃದಯರೇ ಕಾರಣ- ಕಾ.ವೆಂ‌.ಶ್ರೀ.

S. N. Channabasappa "ಶಿವಮೊಗ್ಗ ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ...