Wednesday, August 5, 2026
Wednesday, August 5, 2026

KSRTC ಶಿವಮೊಗ್ಗದ ಸಾರಿಗೆ ಬಸ್ ಡಿಪೋ ಹಿಂಭಾಗವಿಶಾಲ ಜಾಗದಲ್ಲಿ ಉದ್ಯಾನವನ ನಿರ್ಮಿಸಲು ಮನವಿ

Date:

KSRTC ನಗರದ ಕೆಎಸ್‌ಆರ್‌ಟಿಸಿ ಡಿಪ್ಪೋ ಹಿಂಭಾಗ ಉದ್ಯಾನವನಕ್ಕೆಂದೆ ಮೀಸಲಿಟ್ಟಿರುವ ೨ವರೆ ಎಕರೆ ಪ್ರದೇಶವನ್ನು ಅಭಿವೃದ್ಧಿ ಪಡಿಸಿ ಉದ್ಯಾನವನ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಇಂದು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿತು.
ನಗರದ ವಾರ್ಡ್ ನಂ. ೨೭ರಲ್ಲಿ ಮಂಜುನಾಥ ಬಡಾವಣೆಯಲ್ಲಿ ಪಾಲಿಕೆಗೆ ಸೇರಿದ ಸುಮಾರು ೨ವರೆ ಎಕರೆ ಜಾಗದಲ್ಲಿ ಸುತ್ತಲೂ ಪೆನ್ಸಿಂಗ್ ಮಾಡಿ ಉದ್ಯಾನವನ ನಿರ್ಮಿಸಲು ಕಾಯ್ದಿರಿಸಲಾಗಿದೆ. ಆದರೆ ಉದ್ಯಾನವನ ನಿರ್ಮಿಸಲು ವಿಳಂಬ ಮಾಡಲಾಗುತ್ತಿದೆ.
ಮಂಜುನಾಥ ಬಡಾವಣೆ, ಮಿಳ್ಳಗಟ್ಟ, ಬುದ್ಧನಗರ, ಅಣ್ಣಾನಗರ, ಆನಂದರಾವ್ ಬಡಾವಣೆ ಭಾಗದಲ್ಲಿ ಒಂದೂ ಉದ್ಯಾನವನವಿಲ್ಲ. ಇದರಿಂದ ಈ ಭಾಗಗಳ ಹಿರಿಯ ನಾಗರೀಕರು, ಮಕ್ಕಳು ಹಾಗೂ ಮಹಿಳೆಯರು ವಾಯು ವಿಹಾರ, ವ್ಯಾಯಾಮ ಮಕ್ಕಳ ಆಟಿಕೆಗಳು ಇತ್ಯಾದಿಗಳಿಗೆ ಅವಕಾಶವಿಲ್ಲದಂತಾಗಿದೆ.
KSRTC ಪ್ರಸ್ತುತ ಪಾಲಿಕೆ ಮೀಸಲಿಟ್ಟಿರುವ ೨ವರೆ ಜಾಗದಲ್ಲಿ ಉದ್ಯಾನವನ ನಿರ್ಮಿಸುವ ಮೂಲಕ ಈ ಭಾಗದ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಮನವಿಯಲ್ಲಿ ಕೋರಲಾಗಿದೆ.
ಮನವಿ ಸಲ್ಲಿಕೆ ಸಂದರ್ಭದಲ್ಲಿ ಟ್ರಸ್ಟ್‌ನ ಪ್ರಮುಖರಾದ ಕಲ್ಲೂರು ಮೇಘರಾಜ್, ಮಂಜಪ್ಪಗೌಡ, ಎಂ. ಸಂಗಯ್ಯ, ಶಿವಣ್ಣ, ರಾಮಣ್ಣ, ಹಾಲೇಶ್ ಆರ್, ಹಿರಿಯಣ್ಣಗೌಡ, ಗುರುನಾಥ್, ವಿಜಯ ಮತ್ತಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ...

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ...

S. N. Channabasappa ಶಿವಮೊಗ್ಗ ಸಾಂಸ್ಕೃತಿಕ ರಾಜಧಾನಿ ಎಂಬ ಪ್ರಸಿದ್ಧಿಗೆ ಇಲ್ಲಿನ ಸಹೃದಯರೇ ಕಾರಣ- ಕಾ.ವೆಂ‌.ಶ್ರೀ.

S. N. Channabasappa "ಶಿವಮೊಗ್ಗ ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ...