Veerendra Heggade ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ), ವತಿಯಿಂದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ ಯವರ ಮಾರ್ಗದರ್ಶನದಂತೆ ದಿನಾಂಕ ೧೦.೦೬.೨೦೨೬ ರಂದು ಕೂಡ್ಲಿ ಗ್ರಾಮದಲ್ಲಿ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಬೀದಿ ನಾಟಕ ಪ್ರದರ್ಶನ ನಡೆಯಿತು.
Veerendra Heggade ಶ್ರೀ ಶ್ರೀನಿವಾಸ್ ಪಿಡಿಒ ಗ್ರಾಮ ಪಂಚಾಯಿತಿ ಕೂಡ್ಲಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಾಗೂ ಶ್ರೀಮತಿ ನಾಗರತ್ನ ಇವರು ಅಧ್ಯಕ್ಷತೆ ವಹಿಸಿದ್ದರು.
. ಶ್ರೀಯುತ ಜಗದೀಶ್ ಡಾ. ಬಿ ಆರ್ ಅಂಬೇಡ್ಕರ್ ಕಲಾತಂಡ ಭದ್ರಾವತಿ. ಇವರು ಕುಟುಂಬದ ನಿರ್ವಹಣೆ, ಮಕ್ಕಳ ಶಿಕ್ಷಣ, ಮನೆಯ ಹಾಗೂ ಪರಿಸರದ ಸ್ವಚ್ಛತೆ, ಮೂಢನಂಬಿಕೆ, ದುಶ್ಚಟದ ದುಷ್ಪರಿಣಾಮ, ರಸ್ತೆ ನಿಯಮಗಳ ಪಾಲನೆ, ಸಾರ್ವಜನಿಕ ಸ್ಥಳಗಳ ರಕ್ಷಣೆ. ಮುಂತಾದ ವಿಷಯಗಳ ಕುರಿತು ಪ್ರದರ್ಶನವನ್ನು ನೀಡಿದರು. ಜ್ಞಾನವಿಕಾಸ ಸಂಯೋಜಕಿ ಶ್ರೀಮತಿ ರೇಖಾ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಥಿಗಳಾಗಿ ಶ್ರೀಮತಿ ಚೇತನ ಜ್ಞಾನವಿಕಾಸ ಸಮನ್ವಯ ಅಧಿಕಾರಿ ಶಿವಮೊಗ್ಗ. ಇವರು ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಮತ್ತು ಯೋಜನೆಯ ಎಲ್ಲಾ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
