Monday, July 13, 2026
Monday, July 13, 2026

B.Y. Raghavendra ಕೆರೆ ಬಸವಣ್ಣ ಶೇಡಿನ ಕೆರೆ” ಲೋಕಾರ್ಪಣೆ!

Date:

B.Y. Raghavendra ಶ್ರೀ ಡಿ. ಯೇಸು ಪ್ರಕಾಶ್ ಅವರ ಸ್ಮರಣಾರ್ಥ, ಸಾರಾ ಸಂಸ್ಥೆ, ಕೆರೆ ಬಸವಣ್ಣ ಶೇಡಿನ ಕೆರೆ ಬಳಕೆದಾರರ ಸಂಘ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಸಕ್ರಿಯ ಸಹಯೋಗದೊಂದಿಗೆ ಸುಂದರವಾಗಿ ಪುನಶ್ಚೇತನಗೊಳಿಸಲಾದ “ಕೆರೆ ಬಸವಣ್ಣ ಶೇಡಿನ ಕೆರೆ”ಯ ಭವ್ಯ ಉದ್ಘಾಟನಾ ಸಮಾರಂಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿದ್ದರು.

ಕೆರೆಯನ್ನು ಸಂಸದರು ಲೋಕಾರ್ಪಣೆಗೊಳಿಸಿದರು.

ಜಲಮೂಲಗಳ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಯ ಆಶಯದೊಂದಿಗೆ ಹಮ್ಮಿಕೊಳ್ಳಲಾದ ಈ ಜಲಕ್ರಾಂತಿ ಯೋಜನೆಯು ಈ ಭಾಗದ ರೈತ ಬಾಂಧವರಿಗೆ ಹಾಗೂ ಸಾರ್ವಜನಿಕರಿಗೆ ಮುಂಬರುವ ದಿನಗಳಲ್ಲಿ ವರದಾನವಾಗಲಿದೆ ಎಂದು ಬಿ.ವೈ.ರಾಘವೇಂದ್ರ ನುಡಿದರು.

ಗ್ರಾಮೀಣ ಭಾಗದ ಕೆರೆಗಳನ್ನು ಇಂತಹ ಜನಾಂದೋಲನದ ಮೂಲಕ ಜೀರ್ಣೋದ್ಧಾರ ಮಾಡುವುದು ನಮ್ಮ ಮಲೆನಾಡಿನ ಸುಸ್ಥಿರ ಅಭಿವೃದ್ಧಿಗೆ ಅತ್ಯಂತ ಪೂರಕವಾಗಿದೆ ಎಂದು
ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮವು ಹೊಸನಗರ ತಾಲ್ಲೂಕಿನ ಮೂಲೇಗದ್ದೆಯ ಸದಾನಂದ ಶಿವಯೋಗಾಶ್ರಮದ ಶ್ರೀ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳವರ ಪವಿತ್ರ ದಿವ್ಯ ಸಾನಿಧ್ಯದಲ್ಲಿ ಅತ್ಯಂತ ಮಂಗಲಮಯವಾಗಿ ನೆರವೇರಿತು

B.Y. Raghavendra ಸಮಾರಂಭದಲ್ಲಿ ಮಾಜಿ ಸಚಿವರಾದ ಶ್ರೀ ಹರತಾಳು ಹಾಲಪ್ಪನವರು, ಹೊಸನಗರ ಟಿಎಪಿಸಿಎಂಎಸ್ ಅಧ್ಯಕ್ಷರಾದ ಶ್ರೀ ವಾಟಗೋಡು ಸುರೇಶ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಸಾರಾ ಸಂಸ್ಥೆಯ ಪದಾಧಿಕಾರಿಗಳು, ಕೆರೆ ಬಳಕೆದಾರರ ಸಂಘದ ಪ್ರಮುಖರು ಮತ್ತು ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕ ಬಂಧುಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...