Sunday, June 14, 2026
Sunday, June 14, 2026

B.Y. Raghavendra ಕೆರೆ ಬಸವಣ್ಣ ಶೇಡಿನ ಕೆರೆ” ಲೋಕಾರ್ಪಣೆ!

Date:

B.Y. Raghavendra ಶ್ರೀ ಡಿ. ಯೇಸು ಪ್ರಕಾಶ್ ಅವರ ಸ್ಮರಣಾರ್ಥ, ಸಾರಾ ಸಂಸ್ಥೆ, ಕೆರೆ ಬಸವಣ್ಣ ಶೇಡಿನ ಕೆರೆ ಬಳಕೆದಾರರ ಸಂಘ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಸಕ್ರಿಯ ಸಹಯೋಗದೊಂದಿಗೆ ಸುಂದರವಾಗಿ ಪುನಶ್ಚೇತನಗೊಳಿಸಲಾದ “ಕೆರೆ ಬಸವಣ್ಣ ಶೇಡಿನ ಕೆರೆ”ಯ ಭವ್ಯ ಉದ್ಘಾಟನಾ ಸಮಾರಂಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿದ್ದರು.

ಕೆರೆಯನ್ನು ಸಂಸದರು ಲೋಕಾರ್ಪಣೆಗೊಳಿಸಿದರು.

ಜಲಮೂಲಗಳ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಯ ಆಶಯದೊಂದಿಗೆ ಹಮ್ಮಿಕೊಳ್ಳಲಾದ ಈ ಜಲಕ್ರಾಂತಿ ಯೋಜನೆಯು ಈ ಭಾಗದ ರೈತ ಬಾಂಧವರಿಗೆ ಹಾಗೂ ಸಾರ್ವಜನಿಕರಿಗೆ ಮುಂಬರುವ ದಿನಗಳಲ್ಲಿ ವರದಾನವಾಗಲಿದೆ ಎಂದು ಬಿ.ವೈ.ರಾಘವೇಂದ್ರ ನುಡಿದರು.

ಗ್ರಾಮೀಣ ಭಾಗದ ಕೆರೆಗಳನ್ನು ಇಂತಹ ಜನಾಂದೋಲನದ ಮೂಲಕ ಜೀರ್ಣೋದ್ಧಾರ ಮಾಡುವುದು ನಮ್ಮ ಮಲೆನಾಡಿನ ಸುಸ್ಥಿರ ಅಭಿವೃದ್ಧಿಗೆ ಅತ್ಯಂತ ಪೂರಕವಾಗಿದೆ ಎಂದು
ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮವು ಹೊಸನಗರ ತಾಲ್ಲೂಕಿನ ಮೂಲೇಗದ್ದೆಯ ಸದಾನಂದ ಶಿವಯೋಗಾಶ್ರಮದ ಶ್ರೀ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳವರ ಪವಿತ್ರ ದಿವ್ಯ ಸಾನಿಧ್ಯದಲ್ಲಿ ಅತ್ಯಂತ ಮಂಗಲಮಯವಾಗಿ ನೆರವೇರಿತು

B.Y. Raghavendra ಸಮಾರಂಭದಲ್ಲಿ ಮಾಜಿ ಸಚಿವರಾದ ಶ್ರೀ ಹರತಾಳು ಹಾಲಪ್ಪನವರು, ಹೊಸನಗರ ಟಿಎಪಿಸಿಎಂಎಸ್ ಅಧ್ಯಕ್ಷರಾದ ಶ್ರೀ ವಾಟಗೋಡು ಸುರೇಶ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಸಾರಾ ಸಂಸ್ಥೆಯ ಪದಾಧಿಕಾರಿಗಳು, ಕೆರೆ ಬಳಕೆದಾರರ ಸಂಘದ ಪ್ರಮುಖರು ಮತ್ತು ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕ ಬಂಧುಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ರಾಜ್ಯದ ಎಲ್ಲಾ ಅಧಿಕಾರಿಗಳು “ಟೀಮ್ ಕರ್ನಾಟಕ” ಮನೋಭಾವದಿಂದ ಕಾರ್ಯನಿರ್ವಹಿಸಬೇಕು: ಡಿ.ಕೆ. ಶಿವಕುಮಾರ್

D.K. Shivakumar ರಾಜ್ಯದ ಅಭಿವೃದ್ಧಿ, ಭ್ರಷ್ಟಾಚಾರ ನಿರ್ಮೂಲನೆ, ಶಿಕ್ಷಣ, ಕಾನೂನು...

Veerendra Heggade ಕೂಡ್ಲಿಯಲ್ಲಿ ಸಾಮಾಜಿಕಜಾಗೃತಿ ಮೂಡಿಸುವ ಬೀದಿ ನಾಟಕದ ಯಶಸ್ವಿ ಪ್ರದರ್ಶನ

Veerendra Heggade ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ...

Chess ಜುಲೈ 4 ರಿಂದ ದೀರ್ಘ ಆವಧಿಯ ಚೆಸ್ ತರಬೇತಿ ಆರಂಭ.

Chess ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯು ಶಿವಮೊಗ್ಗ ನಗರದ ವಿವಿಧ...