Sunday, June 14, 2026
Sunday, June 14, 2026

ಶಿವಮೊಗ್ಗದಲ್ಲಿ ರೌಡಿಶೀಟರ್ ಹನುಮಂತು ಅಲಿಯಾಸ್ ಮಧು ಕಾಲಿಗೆ ಗುಂಡೇಟು

Date:

ಶಿವಮೊಗ್ಗದಲ್ಲಿ ರೌಡಿಶೀಟರ್ ಹನುಮಂತು ಅಲಿಯಾಸ್ ಮಧುಗೆ ಪೊಲೀಸರು ಗುಂಡೇಟು ನೀಡಿರುವ ಘಟನೆ ನಡೆದಿದೆ. ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಿ ಕರೆತರುತ್ತಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಹಿನ್ನೆಲೆ ಆತ್ಮರಕ್ಷಣೆಗಾಗಿ ಕಾಲಿಗೆ ಗುಂಡು ಹಾರಿಸಲಾಗಿದೆ.

ಶಿವಮೊಗ್ಗ ಹೊರವಲಯದ ಸುಬ್ಬಯ್ಯ ಮೆಡಿಕಲ್ ಕಾಲೇಜು ಸಮೀಪ ಈ ಘಟನೆ ನಡೆದಿದೆ. ನರಸಿಂಹ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹನುಮಂತು ಅಲಿಯಾಸ್ ಮಧುವನ್ನು ಬಂಧಿಸಿ ಕರೆತರುತ್ತಿದ್ದ ವೇಳೆ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ.

ಮೂಲಗಳ ಪ್ರಕಾರ, ಚೈನ್ ಬಳಸಿ ಪೊಲೀಸರ ಮೇಲೆ ದಾಳಿ ನಡೆಸಲು ಯತ್ನಿಸಿದ ಮಧು, ಪೇದೆ ಅಂಜಿನಪ್ಪ ಅವರ ಮೇಲೂ ಹಲ್ಲೆ ನಡೆಸಿದ್ದಾನೆ. ಈ ವೇಳೆ ಆರೋಪಿಗೆ ಹಲವು ಬಾರಿ ಎಚ್ಚರಿಕೆ ನೀಡಲಾಗಿದೆ.

ಕೋಟೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹರೀಶ್ ಪಟೇಲ್ ಎಚ್ಚರಿಕೆ ನೀಡಿದ ಬಳಿಕವೂ ಮಧು ಹಲ್ಲೆಗೆ ಮುಂದಾದ ಹಿನ್ನೆಲೆಯಲ್ಲಿ, ಆತ್ಮರಕ್ಷಣೆಗಾಗಿ ಆರೋಪಿಯ ಬಲಗಾಲಿಗೆ ಗುಂಡು ಹಾರಿಸಲಾಗಿದೆ.

ಗುಂಡೇಟಿನಿಂದ ಗಾಯಗೊಂಡ ಮಧುವನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ B. Nikhil ಆಸ್ಪತ್ರೆಗೆ ಭೇಟಿ ನೀಡಿ ಆರೋಪಿಯ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ.

ನರಸಿಂಹ ಕೊಲೆ ಪ್ರಕರಣದ ಹಿಂದಿನ ಪ್ರಮುಖ ರೂವಾರಿಯಾಗಿರುವ ಮಧು, ಕೊಲೆ ಸಂಚು ರೂಪಿಸಿದ್ದ ಆರೋಪ ಎದುರಿಸುತ್ತಿದ್ದಾನೆ. ಖಚಿತ ಮಾಹಿತಿ ಆಧರಿಸಿ ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರ ಕಾರ್ಯಾಚರಣೆಯ ವೇಳೆ ಈ ಘಟನೆ ನಡೆದಿದೆ.

ಇದೇ ವೇಳೆ, ಆರೋಪಿಯ ಹಲ್ಲೆಯಿಂದ ಗಾಯಗೊಂಡ ಪೇದೆ ಅಂಜಿನಪ್ಪ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ರಾಜ್ಯದ ಎಲ್ಲಾ ಅಧಿಕಾರಿಗಳು “ಟೀಮ್ ಕರ್ನಾಟಕ” ಮನೋಭಾವದಿಂದ ಕಾರ್ಯನಿರ್ವಹಿಸಬೇಕು: ಡಿ.ಕೆ. ಶಿವಕುಮಾರ್

D.K. Shivakumar ರಾಜ್ಯದ ಅಭಿವೃದ್ಧಿ, ಭ್ರಷ್ಟಾಚಾರ ನಿರ್ಮೂಲನೆ, ಶಿಕ್ಷಣ, ಕಾನೂನು...

B.Y. Raghavendra ಕೆರೆ ಬಸವಣ್ಣ ಶೇಡಿನ ಕೆರೆ” ಲೋಕಾರ್ಪಣೆ!

B.Y. Raghavendra ಶ್ರೀ ಡಿ. ಯೇಸು ಪ್ರಕಾಶ್ ಅವರ ಸ್ಮರಣಾರ್ಥ, ಸಾರಾ...

Veerendra Heggade ಕೂಡ್ಲಿಯಲ್ಲಿ ಸಾಮಾಜಿಕಜಾಗೃತಿ ಮೂಡಿಸುವ ಬೀದಿ ನಾಟಕದ ಯಶಸ್ವಿ ಪ್ರದರ್ಶನ

Veerendra Heggade ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ...