ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಹೊಸನಗರದ ಹೊರವಲಯದ ಸಾಗರ ರಸ್ತೆಯ ಅಂಕ್ರೋಡಿ ತಿರುವಿನಲ್ಲಿ ಕಳೆದ ಮಧ್ಯಾಹ್ನ 2:00 ಗಂಟೆ ಸುಮಾರಿಗೆ ನಡೆದಿದೆ. ಸಾಗರದಿಂದ ಹೊಸನಗರಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗು ಜಯನಗರದಿಂದ ಆನಂದಪುರಕ್ಕೆ ತೆರಳುತ್ತಿದ್ದ ಲಾರಿ ನಡುವೆ ಈ ಅಪಘಾತ ಸಂಭವಿಸಿದ್ದು ಸಾಗರ – ಹೊಸನಗರ ಮಧ್ಯೆ ಕೆಲಕಾಲ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ವಿಷಯ ತಿಳಿದ ಹೊಸನಗರ ಪೊಲೀಸರು ಅಪಘಾತ ನಡೆದ ಸ್ಥಳಕ್ಕೆ ತೆರಳಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಅದೃಷ್ಟವಶಾತ್ ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಹೊಸನಗರ ಹೊರವಲಯ: ಬಸ್ ಮತ್ತು ಲಾರಿ ಡಿಕ್ಕಿ, ವಾಹನ ಸಂಚಾರಕ್ಕೆ ಕೆಲಕಾಲ ವ್ಯತ್ಯಯ
Date:
