ಸಾಗರ ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಸಂಸದ ರಾಘವೇಂದ್ರ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ನಿಲ್ದಾಣದ ಮೂಲಸೌಕರ್ಯಗಳ ಪ್ರಗತಿ ಪರಿಶೀಲನೆ ನಡೆಸಿ, ಅಗತ್ಯ ಸುಧಾರಣೆಗಳ ಬಗ್ಗೆ ಚರ್ಚಿಸಿದರು.
ಅಲ್ಲದೆ, ಸ್ಥಳೀಯ ಸಾರ್ವಜನಿಕರು ಹಾಗೂ ಪ್ರಯಾಣಿಕರನ್ನು ಭೇಟಿ ಮಾಡಿ, ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ, ರೈಲ್ವೆ ಸೌಲಭ್ಯಗಳ ಮೇಲ್ದರ್ಜೀಕರಣದ ಕುರಿತು ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಹೆಚ್. ಹಾಲಪ್ಪ ಹರತಾಳು, ಪ್ರಮುಖರಾದ ಶ್ರೀ ಮೇಘರಾಜ್ ಟಿ.ಡಿ, ಶ್ರೀ ಗಣೇಶ್ ಪ್ರಸಾದ್ ಕೆ.ಆರ್, ಶ್ರೀಮತಿ ಮಧುರ ಶಿವಾನಂದ ಹಾಗೂ ಪಕ್ಷದ ಪ್ರಮುಖರು, ಮಹಿಳಾ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
