Thursday, June 18, 2026
Thursday, June 18, 2026

ಮಹಿಷಿಯಲ್ಲಿನ ಉತ್ತರಾದಿಮಠದಲ್ಲಿನ ಚಿನ್ನದ ಹಲಗಾರತಿಗಳ ಕಳವು ಪ್ರಕರಣ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಮಹಿಷಿ ಉತ್ತರಾಧಿ ಮಠದಲ್ಲಿ ಮತ್ತೊಮ್ಮೆ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನದ ಹಲಗಾರತಿಗಳು ನಾಪತ್ತೆಯಾಗಿರುವುದು ಭಕ್ತರಲ್ಲಿ ಆತಂಕ ಮೂಡಿಸಿದೆ.

ತುಂಗಾ ನದಿಯ ದಡದಲ್ಲಿರುವ ಮಹಿಷಿ ಉತ್ತರಾಧಿ ಮಠವು ಮಧ್ವ ಪರಂಪರೆಯ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿದೆ. ಪ್ರತಿದಿನ ನೂರಾರು ಭಕ್ತರು ಭೇಟಿ ನೀಡುವ ಈ ಮಠದಲ್ಲಿ ಇದೀಗ ಚಿನ್ನಾಭರಣ ಕಳವು ಪ್ರಕರಣ ಬೆಳಕಿಗೆ ಬಂದಿದೆ.

ಮಠದ ಮೂಲಗಳ ಪ್ರಕಾರ, ಸುಮಾರು 750 ಗ್ರಾಂ ತೂಕದ ಚಿನ್ನದ ಹಲಗಾರತಿಗಳು ನಾಪತ್ತೆಯಾಗಿವೆ. ಒಂದೊಂದು ಹಲಗಾರತಿ ಸುಮಾರು 50 ಗ್ರಾಂ ಚಿನ್ನದಿಂದ ನಿರ್ಮಿತವಾಗಿದ್ದು, ಒಟ್ಟು 15 ಹಲಗಾರತಿಗಳು ಕಾಣೆಯಾಗಿರುವುದಾಗಿ ತಿಳಿದುಬಂದಿದೆ.

ಪ್ರಾಥಮಿಕ ಅಂದಾಜಿನ ಪ್ರಕಾರ, ಕಳುವಾಗಿರುವ ಚಿನ್ನಾಭರಣದ ಮೌಲ್ಯ ಒಂದು ಕೋಟಿಗೂ ಅಧಿಕ ಎಂದು ಹೇಳಲಾಗುತ್ತಿದೆ. ಈ ಘಟನೆ ಮಠದ ಆಡಳಿತ ಮಂಡಳಿ ಹಾಗೂ ಭಕ್ತರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮಹಿಷಿ ಉತ್ತರಾಧಿ ಮಠದಲ್ಲಿ ಚಿನ್ನದ ಹಲಗಾರತಿಗಳ ನಾಪತ್ತೆ ಪ್ರಕರಣ ಇದೀಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಭದ್ರತಾ ವ್ಯವಸ್ಥೆಯ ನಡುವೆಯೂ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹೇಗೆ ನಾಪತ್ತೆಯಾಯಿತು ಎಂಬುದರ ಕುರಿತು ತನಿಖೆ ನಡೆಯಬೇಕಿದೆ. ಈ ಪ್ರಕರಣದ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪೊಲೀಸರು ಪತ್ತೆಹಚ್ಚಬೇಕಿದೆ.

ಗಮನಾರ್ಹ ಸಂಗತಿಯೆಂದರೆ, ಇದೇ ಮಠದಲ್ಲಿ ಕಳೆದ ವರ್ಷ ಏಪ್ರಿಲ್ 5ರಂದು ದರೋಡೆ ಯತ್ನ ನಡೆದಿತ್ತು. ಮಠದಲ್ಲಿ ಸುಮಾರು 300 ಕೋಟಿ ರೂಪಾಯಿ ಹಣ ಸಂಗ್ರಹಿಸಲಾಗಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ 12 ರಿಂದ 15 ಮಂದಿಯ ತಂಡ ದರೋಡೆಗೆ ಯತ್ನಿಸಿತ್ತು.

ಆ ಸಂದರ್ಭದಲ್ಲಿ ನಗದು, ಲ್ಯಾಪ್‌ಟಾಪ್ ಹಾಗೂ ಮೊಬೈಲ್ ಸೇರಿದಂತೆ ಸುಮಾರು 1.16 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ದರೋಡೆಕೋರರು ಕೊಂಡೊಯ್ದಿದ್ದರು. ಬಳಿಕ ಪ್ರಕರಣದ ತನಿಖೆ ವೇಳೆ ಪ್ರಮುಖ ಆರೋಪಿಯನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...