Monday, August 10, 2026
Monday, August 10, 2026

S.N.Channabasappa ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರಲು ಯತ್ನಿಸಿದ ಪ್ರಕಾಶ್ ರಾಜ್ ಬಂಧನಕ್ಕೆ ಶಾಸಕ ಎಸ್.ಎನ್‌.ಚನ್ನಬಸಪ್ಪಆಗ್ರಹಿಸಿ ಪತ್ರ

Date:

S.N.Channabasappaಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿದೆ ಎನ್ನಲಾದ ಷಡ್ಯಂತ್ರದಲ್ಲಿ ನಟ ಪ್ರಕಾಶ್ ರಾಜ್ ಅವರ ಪಾತ್ರವನ್ನು ತನಿಖೆಗೊಳಪಡಿಸಬೇಕು ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಧರ್ಮಸ್ಥಳದ ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಲಾದ “ಬುರುಡೆ ಗ್ಯಾಂಗ್” ಜೊತೆಗೆ ಪ್ರಕಾಶ್ ರಾಜ್ ಕೈಜೋಡಿಸಿರುವ ಶಂಕೆಗಳು ವ್ಯಕ್ತವಾಗುತ್ತಿವೆ ಎಂದು ಹೇಳಿದ್ದಾರೆ.

ಪ್ರಕಾಶ್ ರಾಜ್ ಅವರಿಗೆ ಯಾವುದೇ ಪೂರ್ವ ಪರಿಚಯವಿಲ್ಲದ ವ್ಯಕ್ತಿಗಳು ನೇರವಾಗಿ ಸಂಪರ್ಕ ಸಾಧಿಸಿದ್ದೇಕೆ, ಧರ್ಮಸ್ಥಳಕ್ಕೆ ಸಂಬಂಧಿಸಿದ ವಿಚಾರಗಳಲ್ಲಿ ಅವರು ಸಲಹೆ ನೀಡಿದ್ದಾರೆಯೇ ಎಂಬ ಪ್ರಶ್ನೆಗಳನ್ನು ಚನ್ನಬಸಪ್ಪ ಎತ್ತಿದ್ದಾರೆ.

ಇದೇ ವೇಳೆ, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಪ್ರಕಾಶ್ ರಾಜ್ ಅವರನ್ನು ಇದುವರೆಗೆ ವಿಚಾರಣೆಗೆ ಕರೆಯದಿರುವುದರ ಬಗ್ಗೆಯೂ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಧರ್ಮಸ್ಥಳ ಪ್ರಕರಣದೊಂದಿಗೆ ತಮ್ಮ ಸಂಬಂಧವಿಲ್ಲ ಎಂದು ಹೇಳಿಕೊಳ್ಳುವ ಪ್ರಕಾಶ್ ರಾಜ್, ಆರಂಭಿಕ ಹಂತದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಂಬಂಧಿತ ವ್ಯಕ್ತಿಗಳ ಪರವಾಗಿ ಪೋಸ್ಟ್‌ಗಳನ್ನು ಪ್ರಕಟಿಸಿದ್ದೇಕೆ ಎಂಬ ಪ್ರಶ್ನೆಯನ್ನೂ ಶಾಸಕರು ಮುಂದಿಟ್ಟಿದ್ದಾರೆ.

S.N.Channabasappa ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದರೆ ಪ್ರಕರಣದಲ್ಲಿ ಪ್ರಕಾಶ್ ರಾಜ್ ಅವರ ಪಾತ್ರದ ಕುರಿತು ಸಮಗ್ರ ತನಿಖೆ ನಡೆಸುವ ಅಗತ್ಯವಿದೆ ಎಂದು ಚನ್ನಬಸಪ್ಪ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯ ಸರ್ಕಾರವು ಯಾವುದೇ ಒತ್ತಡಗಳಿಗೆ ಮಣಿಯದೆ, ನಟ ಪ್ರಕಾಶ್ ರಾಜ್ ಅವರನ್ನು ವಿಚಾರಣೆಗೆ ಒಳಪಡಿಸಿ, ಅಗತ್ಯವಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...