Monday, August 10, 2026
Monday, August 10, 2026

“ಕರ್ತವ್ಯ ಆ್ಯಪ್ ” ನಲ್ಲಿ ಶೇ. 70.6 ಕ್ಕೂ ಹೆಚ್ಚು ನೌಕರರ ನೋಂದಾವಣೆ. ಸರ್ಕಾರದ ಸ್ಪಷ್ಠಿಕರಣ

Date:

“ಕರ್ತವ್ಯ ಆಪ್‌ನಲ್ಲಿ 2.13 ಲಕ್ಷ ಉದ್ಯೋಗಿಗಳು ನೋಂದಣಿಯಾಗಿಲ್ಲ” ಎಂಬ ಕೆಲವು ಮಾಧ್ಯಮಗಳ ವರದಿಗಳಿಗೆ ಸರ್ಕಾರವು ಅಧಿಕೃತ ಸ್ಪಷ್ಟೀಕರಣವನ್ನು ನೀಡಿದೆ.

ಪ್ರಸ್ತುತ ‘ಕರ್ತವ್ಯ’ (KAAMS) ಯೋಜನೆಯಡಿ ಉದ್ಯೋಗಿಗಳ ನೋಂದಣಿ ಪ್ರಕ್ರಿಯೆಯು ಅತ್ಯಂತ ವೇಗವಾಗಿ ನಡೆಯುತ್ತಿದ್ದು, ಈಗಾಗಲೇ ಶೇಕಡಾ 70.6 ಕ್ಕಿಂತ ಹೆಚ್ಚು ನೌಕರರು ಯಶಸ್ವಿಯಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ವೇಗದ ಪ್ರಗತಿ : ಮಾಧ್ಯಮಗಳಲ್ಲಿ ಪ್ರಕಟವಾಗಿದ್ದ 2,13,925 ನೌಕರರ ಅಪೂರ್ಣ ನೋಂದಣಿಯ ಅಂಕಿ-ಅಂಶಗಳು ಜೂನ್ 12, 2026 ರವರೆಗಿನ ಮಾಹಿತಿಯಾಗಿದ್ದವು. ಆದರೆ ಕಳೆದ 4-5 ದಿನಗಳಲ್ಲಿ ನಡೆಸಲಾದ ವಿಶೇಷ ಆಂದೋಲನದಿಂದಾಗಿ ಈ ಸಂಖ್ಯೆ 2026 ನೇ ಜೂನ್ 18 ರ ವೇಳೆಗೆ 1,40,433 ಕ್ಕೆ ಕುಸಿದಿದೆ. ಅಂದರೆ ಕೇವಲ ಒಂದು ವಾರದಲ್ಲಿ ನೋಂದಣಿಯಾಗದ ನೌಕರರ ಸಂಖ್ಯೆಯಲ್ಲಿ ಶೇ. 34.4 ರಷ್ಟು ಭಾರಿ ಇಳಿಕೆಯಾಗಿದೆ.

ನೋಂದಣಿ ಸ್ಥಿತಿಗತಿ :
ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (HRMS) ದತ್ತಾಂಶದ ಪ್ರಕಾರ, ಒಟ್ಟು 43 ಪ್ರಮುಖ ಇಲಾಖೆಗಳು ಹಾಗೂ 137 ಸರಣಿ ಇಲಾಖೆಗಳು/ಸಂಸ್ಥೆಗಳ ವ್ಯಾಪ್ತಿಯಲ್ಲಿರುವ 4,78,181 ನೌಕರರ ಪೈಕಿ 3,37,748 (ಶೇ. 70.6) ನೌಕರರು ಈಗಾಗಲೇ ಆಪ್‌ನಲ್ಲಿ ಯಶಸ್ವಿಯಾಗಿ ನೋಂದಾಯಿಸಿಕೊಂಡಿದ್ದಾರೆ.

ದೈನಂದಿನ ಸಕ್ರಿಯ ಬಳಕೆ :

2026 ನೇ ಜೂನ್ 18 ರ ಬೆಳಿಗ್ಗೆ 11:00 ಗಂಟೆಯ ಒಳಗೆ ಒಟ್ಟು ನೋಂದಾಯಿತ ಬಳಕೆದಾರರಲ್ಲಿ ಸುಮಾರು ಶೇ. 57 ರಷ್ಟು (1,92,605 ನೌಕರರು) ಉದ್ಯೋಗಿಗಳು ಆಪ್ ಮೂಲಕ ತಮ್ಮ ಹಾಜರಾತಿಯನ್ನು ದಾಖಲಿಸಿದ್ದಾರೆ. ಬಾಕಿ ಉಳಿದಿರುವ ಶೇ. 29.4 ರಷ್ಟು ನೌಕರರ ನೋಂದಣಿಗಾಗಿ ಇ-ಆಡಳಿತ ಕೇಂದ್ರವು (CeG) ವಿಶೇಷ ತರಬೇತಿ ಮತ್ತು ನೋಂದಣಿ ಶಿಬಿರಗಳನ್ನು ಆಯೋಜಿಸಿದೆ. ತಾಂತ್ರಿಕ ಸಮಸ್ಯೆಗಳ ಪರಿಹಾರಕ್ಕಾಗಿ ನೋಡಲ್ ಅಧಿಕಾರಿಗಳು, ಸಹಾಯವಾಣಿ ಮತ್ತು ಎಐ (AI) ಆಧಾರಿತ ವಾಯ್ಸ್ ಬಾಟ್ ಸೌಲಭ್ಯವನ್ನು ಕಲ್ಪಿಸಲಾಗಿದೆ.

​ಎಲ್ಲಾ ಅಧಿಕಾರಿಗಳು ಮತ್ತು ನೌಕರರು ನಿಗದಿತ ಸಮಯದೊಳಗೆ ಶೇ. 100 ರಷ್ಟು ನೋಂದಣಿ ಪೂರ್ಣಗೊಳಿಸುವಂತೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

‘ಕರ್ತವ್ಯ’ ತಂತ್ರಾಂಶವು ಸರ್ಕಾರಿ ನೌಕರರ ಹಾಜರಾತಿಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ತರಲು ರೂಪಿಸಲಾದ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ಸರ್ಕಾರ ಪುನರುಚ್ಚರಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...