Wednesday, August 5, 2026
Wednesday, August 5, 2026

B.Y. Raghavendra ಮುಂದಿನ ಪೀಳಿಗೆಗೆ ಫಲವತ್ತಾದ ಕೃಷಿ ಭೂಮಿಯನ್ನ ಹಸ್ತಾಂತರಿಸುವುದು ಎಲ್ಲರ ಕರ್ತವ್ಯ- ಬಿ.ವೈ.ರಾಘವೇಂದ್ರ

Date:

B.Y. Raghavendra ಶಿವಮೊಗ್ಗದ ಐ.ಸಿ.ಎ.ಆರ್ – ಕೃಷಿ ವಿಜ್ಞಾನ ಕೇಂದ್ರ ಹಾಗೂ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ “ಕೃಷಿ ಭೂಮಿ ಉಳಿಸಿ ಅಭಿಯಾನ” ಅಂಗವಾಗಿ, ‘ಸಾವಯವ ಕೃಷಿ’ – ತರಬೇತಿ ಮತ್ತು ಮಾಹಿತಿ ಕಾರ್ಯಾಗಾರವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.
ರೈತ ಬಾಂಧವರೊಂದಿಗೆ ಸಂವಾದ ನಡೆಸಿದರು.

“ಆರೋಗ್ಯಕರ ಮಣ್ಣು, ಸಧೃಡ ರೈತರು, ಸಮೃದ್ಧ ಭಾರತ” ಎಂಬ ಧ್ಯೇಯದೊಂದಿಗೆ ಇಡೀ ಜೂನ್ ತಿಂಗಳಾದ್ಯಂತ ದೇಶಾದ್ಯಂತ ನಡೆಯುತ್ತಿರುವ ಈ ವಿಶೇಷ ಅಭಿಯಾನವು, ನಮ್ಮ ಮಣ್ಣಿನ ಫಲವತ್ತತೆಯನ್ನು ಕಾಪಾಡುವಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ. ವಿಜ್ಞಾನಿಗಳ ನೇರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ತರಬೇತಿಗಳು ರೈತರಲ್ಲಿ ಆಧುನಿಕ ಹಾಗೂ ಸಾವಯವ ಕೃಷಿ ಪದ್ಧತಿಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುತ್ತಿವೆ.

ಈ ಕಾರ್ಯಕ್ರಮದಲ್ಲಿ ಹಿರಿಯ ಮಾರ್ಗದರ್ಶಕರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್. ರುದ್ರೇಗೌಡರು, ಕೆ.ಎಸ್.ಎನ್.ಯು.ಎ.ಎಚ್.ಎಸ್ ಶಿವಮೊಗ್ಗದ ಮಾನ್ಯ ಕುಲಪತಿಗಳಾದ ಡಾ. ಆರ್.ಸಿ. ಜಗದೀಶ್, ವಿಸ್ತರಣಾ ನಿರ್ದೇಶಕರಾದ ಡಾ. ರಾಘವೇಂದ್ರ ಮಾರ್ಥ, ಐ.ಸಿ.ಎ.ಆರ್-ಕೆ.ವಿ.ಕೆ, ಶಿವಮೊಗ್ಗದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ. ಸಿ. ಸುನಿಲ್, ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಪದಾಧಿಕಾರಿಗಳು ಹಾಗೂ ಶಿವಮೊಗ್ಗದ ಪ್ರಗತಿಪರ ರೈತ ಬಾಂಧವರು ಉಪಸ್ಥಿತರಿದ್ದರು.

B.Y. Raghavendra ರಾಸಾಯನಿಕ ಮುಕ್ತ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು, ಭೂಮಿಯ ಸಾರವನ್ನು ಹೆಚ್ಚಿಸುವ ಮೂಲಕ ಮುಂದಿನ ಪೀಳಿಗೆಗೆ ಫಲವತ್ತಾದ ಕೃಷಿ ಭೂಮಿಯನ್ನು ಹಸ್ತಾಂತರಿಸುವುದು ಪ್ರಸ್ತುತ ಎಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ರೈತರಿಗೆ ಅಗತ್ಯವಿರುವ ಎಲ್ಲಾ ತಾಂತ್ರಿಕ ನೆರವು ಹಾಗೂ ಪ್ರೋತ್ಸಾಹ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ.
ಎಂದು ಬಿ.ವೈರಾಘವೇಂದ್ರ ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ...

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ...

S. N. Channabasappa ಶಿವಮೊಗ್ಗ ಸಾಂಸ್ಕೃತಿಕ ರಾಜಧಾನಿ ಎಂಬ ಪ್ರಸಿದ್ಧಿಗೆ ಇಲ್ಲಿನ ಸಹೃದಯರೇ ಕಾರಣ- ಕಾ.ವೆಂ‌.ಶ್ರೀ.

S. N. Channabasappa "ಶಿವಮೊಗ್ಗ ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ...