Monday, August 10, 2026
Monday, August 10, 2026

ಚಂದ್ರಗುತ್ತಿ ಶ್ರೀರೇಣುಕಾಂಬ ದೇಗುಲದ ಹುಂಡಿ ನಿಧಿ ಎಣಿಕೆ, ₹2.29.60 ಕಾಣಿಕೆ ಸಂಗ್ರಹ

Date:

ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದೇವಸ್ಥಾನದ ಕಾಣಿಕೆ ಹುಂಡಿ ನಾಣ್ಯಗಳ ಎಣಿಕೆ ಕಾರ್ಯವು ಶನಿವಾರ ಆಡಳಿತ ಮಂಡಳಿಯ ಕಚೇರಿಯಲ್ಲಿ ನಡೆಯಿತು. ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಮೀಳಾ ಕುಮಾರಿ ಅವರ ಸಮ್ಮುಖದಲ್ಲಿ, ಭಕ್ತಾದಿಗಳು ಹುಣ್ಣಿಮೆ ಹಾಗೂ ವಿಶೇಷ ದಿನಗಳ ಸಂದರ್ಭದಲ್ಲಿ ದೇವಿಗೆ ಸಮರ್ಪಿಸಿದ್ದ ಕಾಣಿಕೆ ಹುಂಡಿಯ ನಾಣ್ಯಗಳ ಎಣಿಕೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ನಾಣ್ಯಗಳ ಎಣಿಕೆ ಕಾರ್ಯ ನಡೆಸಲಾಗಿದ್ದು, ಸುಮಾರು 2,29,60 ರೂ ನಾಣ್ಯಗಳು ಸಂಗ್ರಹವಾಗಿದೆ.
ಕಳೆದ 10 ದಿನಗಳ ಹಿಂದೆಯಷ್ಟೇ ದೇವಸ್ಥಾನದ ಕಾಣಿಕೆ ಹುಂಡಿಯ ನೋಟುಗಳನ್ನು ಎಣಿಕೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ 33,90,580 ರೂ. ನಗದು ಸಂಗ್ರಹವಾಗಿತ್ತು. ನಾಣ್ಯಗಳ ಎಣಿಕೆ ಕಾರ್ಯ ನಡೆಯುತ್ತಿದ್ದ ಕೊಠಡಿಯ ಸುತ್ತಲೂ ಮುನ್ನೆಚ್ಚರಿಕಾ ಕ್ರಮವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಎಣಿಕೆ ಕಾರ್ಯದಲ್ಲಿ ಮುಜರಾಯಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...