Sunday, June 21, 2026
Sunday, June 21, 2026

ಚಂದ್ರಗುತ್ತಿ ಶ್ರೀರೇಣುಕಾಂಬ ದೇಗುಲದ ಹುಂಡಿ ನಿಧಿ ಎಣಿಕೆ, ₹2.29.60 ಕಾಣಿಕೆ ಸಂಗ್ರಹ

Date:

ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದೇವಸ್ಥಾನದ ಕಾಣಿಕೆ ಹುಂಡಿ ನಾಣ್ಯಗಳ ಎಣಿಕೆ ಕಾರ್ಯವು ಶನಿವಾರ ಆಡಳಿತ ಮಂಡಳಿಯ ಕಚೇರಿಯಲ್ಲಿ ನಡೆಯಿತು. ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಮೀಳಾ ಕುಮಾರಿ ಅವರ ಸಮ್ಮುಖದಲ್ಲಿ, ಭಕ್ತಾದಿಗಳು ಹುಣ್ಣಿಮೆ ಹಾಗೂ ವಿಶೇಷ ದಿನಗಳ ಸಂದರ್ಭದಲ್ಲಿ ದೇವಿಗೆ ಸಮರ್ಪಿಸಿದ್ದ ಕಾಣಿಕೆ ಹುಂಡಿಯ ನಾಣ್ಯಗಳ ಎಣಿಕೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ನಾಣ್ಯಗಳ ಎಣಿಕೆ ಕಾರ್ಯ ನಡೆಸಲಾಗಿದ್ದು, ಸುಮಾರು 2,29,60 ರೂ ನಾಣ್ಯಗಳು ಸಂಗ್ರಹವಾಗಿದೆ.
ಕಳೆದ 10 ದಿನಗಳ ಹಿಂದೆಯಷ್ಟೇ ದೇವಸ್ಥಾನದ ಕಾಣಿಕೆ ಹುಂಡಿಯ ನೋಟುಗಳನ್ನು ಎಣಿಕೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ 33,90,580 ರೂ. ನಗದು ಸಂಗ್ರಹವಾಗಿತ್ತು. ನಾಣ್ಯಗಳ ಎಣಿಕೆ ಕಾರ್ಯ ನಡೆಯುತ್ತಿದ್ದ ಕೊಠಡಿಯ ಸುತ್ತಲೂ ಮುನ್ನೆಚ್ಚರಿಕಾ ಕ್ರಮವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಎಣಿಕೆ ಕಾರ್ಯದಲ್ಲಿ ಮುಜರಾಯಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಎನ್.ಜೆ.ಸಚಿನ್ ಗೆ ಕುವೆಂಪು ವಿವಿಯಿಂದ ಪಿ ಹೆಚ್ ಡಿ ಪದವಿ ಘೋಷಣೆ

Kuvempu University ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ...

B.Y. Raghavendra ಮೋದಿ @12 ಯುವ ಸಂವಾದ” ದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗಿ

B.Y. Raghavendra ಭಾರತೀಯ ಜನತಾ ಯುವ ಮೋರ್ಚಾ, ಶಿವಮೊಗ್ಗ ವತಿಯಿಂದ ಆಯೋಜಿಸಲಾದ...

Klive Special Article ಅಪರೂಪದ “ಜಲಾಧಿವಾಸ ಗಣಪತಿ” ಕ್ಷೇತ್ರ. ...

Klive Special Article ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಯಡಾಡಿ ಮತ್ಯಾಡಿ...