ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದೇವಸ್ಥಾನದ ಕಾಣಿಕೆ ಹುಂಡಿ ನಾಣ್ಯಗಳ ಎಣಿಕೆ ಕಾರ್ಯವು ಶನಿವಾರ ಆಡಳಿತ ಮಂಡಳಿಯ ಕಚೇರಿಯಲ್ಲಿ ನಡೆಯಿತು. ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಮೀಳಾ ಕುಮಾರಿ ಅವರ ಸಮ್ಮುಖದಲ್ಲಿ, ಭಕ್ತಾದಿಗಳು ಹುಣ್ಣಿಮೆ ಹಾಗೂ ವಿಶೇಷ ದಿನಗಳ ಸಂದರ್ಭದಲ್ಲಿ ದೇವಿಗೆ ಸಮರ್ಪಿಸಿದ್ದ ಕಾಣಿಕೆ ಹುಂಡಿಯ ನಾಣ್ಯಗಳ ಎಣಿಕೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ನಾಣ್ಯಗಳ ಎಣಿಕೆ ಕಾರ್ಯ ನಡೆಸಲಾಗಿದ್ದು, ಸುಮಾರು 2,29,60 ರೂ ನಾಣ್ಯಗಳು ಸಂಗ್ರಹವಾಗಿದೆ.
ಕಳೆದ 10 ದಿನಗಳ ಹಿಂದೆಯಷ್ಟೇ ದೇವಸ್ಥಾನದ ಕಾಣಿಕೆ ಹುಂಡಿಯ ನೋಟುಗಳನ್ನು ಎಣಿಕೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ 33,90,580 ರೂ. ನಗದು ಸಂಗ್ರಹವಾಗಿತ್ತು. ನಾಣ್ಯಗಳ ಎಣಿಕೆ ಕಾರ್ಯ ನಡೆಯುತ್ತಿದ್ದ ಕೊಠಡಿಯ ಸುತ್ತಲೂ ಮುನ್ನೆಚ್ಚರಿಕಾ ಕ್ರಮವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಎಣಿಕೆ ಕಾರ್ಯದಲ್ಲಿ ಮುಜರಾಯಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಚಂದ್ರಗುತ್ತಿ ಶ್ರೀರೇಣುಕಾಂಬ ದೇಗುಲದ ಹುಂಡಿ ನಿಧಿ ಎಣಿಕೆ, ₹2.29.60 ಕಾಣಿಕೆ ಸಂಗ್ರಹ
Date:
