Sunday, August 9, 2026
Sunday, August 9, 2026

B.Y. Raghavendra ಮೋದಿ @12 ಯುವ ಸಂವಾದ” ದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗಿ

Date:

B.Y. Raghavendra ಭಾರತೀಯ ಜನತಾ ಯುವ ಮೋರ್ಚಾ, ಶಿವಮೊಗ್ಗ ವತಿಯಿಂದ ಆಯೋಜಿಸಲಾದ “ಮೋದಿ @12 ಯುವ ಸಂವಾದ” ಕಾರ್ಯಕ್ರಮದಲ್ಲಿ ಜಿಲ್ಲೆಯ ನೂರಾರು ಯುವಕರು ಭಾಗವಹಿಸಿ ಅರ್ಥಪೂರ್ಣ ಸಂವಾದ ನಡೆಸಿದರು.

ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 12 ವರ್ಷಗಳ ಆಡಳಿತ, ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಜಾರಿಗೆ ತಂದಿರುವ ವಿವಿಧ ಯೋಜನೆಗಳು ಹಾಗೂ ವಿಕಸಿತ ಭಾರತದ ನಿರ್ಮಾಣದಲ್ಲಿ ಯುವಕರ ಪಾತ್ರದ ಕುರಿತು ಚರ್ಚೆ ನಡೆಯಿತು. ಯುವಜನರ ಆಲೋಚನೆಗಳು, ನವೀನ ಕಲ್ಪನೆಗಳು ಮತ್ತು ಸಲಹೆಗಳನ್ನು ಆಲಿಸಲು ಈ ವೇದಿಕೆ ಪರಿಣಾಮಕಾರಿ ಮಾಧ್ಯಮವಾಗಿ ಕಾರ್ಯನಿರ್ವಹಿಸಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಜಗದೀಶ್, ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಚೆನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್ ಹಾಗೂ ಡಾ. ಧನಂಜಯ್ ಸರ್ಜಿ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಶಾಂತ್ ಕುಕ್ಕೆ ಮತ್ತು ಟಿ.ಡಿ. ಮೇಘರಾಜ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

B.Y. Raghavendra ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಯುವಕರ ಸಕ್ರಿಯ ಭಾಗವಹಿಸುವಿಕೆ ದೇಶದ ಅಭಿವೃದ್ಧಿಗೆ ಹೊಸ ಶಕ್ತಿ ನೀಡಲಿದೆ ಎಂದು ತಿಳಿಸಿದರು. ಜಿಲ್ಲೆಯ ಯುವ ಸಬಲೀಕರಣ ಹಾಗೂ ವಿಕಸಿತ ಭಾರತದ ಸಂಕಲ್ಪಕ್ಕೆ ಬೆಂಬಲವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ ಯುವಕರಿಗೆ ಮತ್ತು ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಯುವ ಮೋರ್ಚಾ ಪದಾಧಿಕಾರಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...