Wednesday, June 24, 2026
Wednesday, June 24, 2026

Yoga Day ಯೋಗ ಒಂದು ದಿನಕ್ಕೆ ಸೀಮಿತವಾಗಬಾರದು.ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಬೇಕು- ಬಿ.ಹೆಚ್.ನಿರಂಜನಮೂರ್ತಿ.

Date:

Yoga Day ಯೋಗ ಒಂದು ದಿನಕ್ಕೆ ಸೀಮಿತವಾಗಬಾರದು ದೈನಂದಿನ ಬದುಕಿನ ಅವಿಭಾಜ್ಯ ಕಾರ್ಯವಾಗಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ದೈಹಿಕ ಶಿಕ್ಷಣ ಅಧಿಕಾರಿಗಳಾದ ಬಿ. ಹೆಚ್. ನಿರಂಜನ್ ಮೂರ್ತಿ ಅಭಿಪ್ರಾಯ ಪಟ್ಟರು.
ಅವರು ನಿನ್ನೆ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ) ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಶಾಲಾ-ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರ ಆರೋಗ್ಯ ಚೆನ್ನಾಗಿದ್ದರೆ ಸದೃಢವಾದ ಮತ್ತು ಭವ್ಯ ಭಾರತವನ್ನು ಕಟ್ಟಬಹುದಾಗಿದೆ ಎಂದು ಹೇಳಿದರು.
ಪ್ರಸ್ತುತ ದಿನಮಾನಗಳಲ್ಲಿ ಶುದ್ದವಾದ ಗಾಳಿಗೂ ಕೂಡ ಪರಿತಪಿಸುವಂತಾಗಿದೆ.ಶ್ವಾಸ ನಿಶ್ವಾಸದ ಮೇಲೆ ನಮ್ಮ ಬದುಕು ನಿಂತಿದೆ. ಸರಿಯಾದ ಮಾರ್ಗದರ್ಶನದಲ್ಲಿ ನಾವುಗಳೂ ಯೋಗಾಭ್ಯಾಸ ಮಾಡಿದ್ದೇ ಆದರೆ ಯಾವುದೇ ಮದ್ದಿಲ್ಲದೇ ರೋಗವನ್ನು ಹೋಗಲಾಡಿಸಬಹುದಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಯೋಗದ ಅಭ್ಯಾಸವನ್ನು ಮಾಡಿಕೊಳ್ಳಬೇಕು ಎಂದರು.
ಬಿಜಿಎಸ್ ಗುರುಕುಲ ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್. ಎಚ್. ಮಾತನಾಡುತ್ತ, ಕೇವಲ ಭಾರತವಲ್ಲದೇ ಇಡೀ ವಿಶ್ವದಲ್ಲಿ ಯೋಗಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.
Yoga Day ಮಾತನಾಡುತ್ತಾ,ಯೋಗದಿಂದ ನಮ್ಮ ಆರೋಗ್ಯ ಕಾಪಾಡುವ ಜೊತೆಗೆ ದೇಹ ಮತ್ತು ಮನಸ್ಸನ್ನು ಆರೋಗ್ಯ ವಾಗಿಟ್ಟುಕೊಂಡಾಗ ದಿನನಿತ್ಯದ ಕೆಲಸ-ಕಾರ್ಯಗಳನ್ನು ನಿರೀಕ್ಷೆಯಂತೆ ನಿರ್ವಹಿಸಲು, ಸದಾ ಲವ ಲವಿಕೆಯಿಂದಿರಲು ಸಾಧ್ಯವಾಗಲಿದೆ ಎಂದರು. ಈ ನಿಟ್ಟಿನಲ್ಲಿ ಎಲ್ಲರೂ ಯೋಗಭ್ಯಾಸವನ್ನು ನಿಯಮಿತವಾಗಿ ರೂಢಿಸಿಕೊಳ್ಳುವುದು ಉತ್ತಮ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕರಾದ ಮಾಲತೇಶ್, ಶ್ರೀಮತಿ ಅಶ್ವಿನಿ, ಹಾಗೂ ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...

Sri Jayachamarajendra Government ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಗೆ ಅರಿವಳಿಕೆ ತಜ್ಞರ ನೇಮಕಾತಿಗೆ ನೇರ ಸಂದರ್ಶನ.

Sri Jayachamarajendra Government ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಶಿವಮೊಗ್ಗ ಜಿಲ್ಲಾ ಆರೋಗ್ಯ...

S.N. Channabasappa ಅರ್ಹ ಬಡವರ ಬಿ.ಪಿ.ಎಲ್.ಕಾರ್ಡ್ ರದ್ದತಿಯಿಂದ ಜನಸಾಮಾನ್ಯರ ಬದುಕು ದುಸ್ತರ- ಎಸ್.ಎನ್.ಚನ್ನಬಸಪ್ಪ.

S.N. Channabasappa ಅರ್ಹ ಬಡವರ ಬಿಪಿಎಲ್ ಕಾರ್ಡ್ ರದ್ದತಿಯಿಂದ ಜನಸಾಮಾನ್ಯರ ಬದುಕು...

B.Y. Raghavendra ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಿ: ರಾಜ್ಯಪಾಲರಿಗೆ ಸಂಸದ ರಾಘವೇಂದ್ರ ಮನವಿ ಅರ್ಪಣೆ.

B.Y. Raghavendra ಹೈಕೋರ್ಟ್ ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ; ರಾಜ್ಯಪಾಲರ...