Thursday, June 25, 2026
Thursday, June 25, 2026

ಆಸ್ತಿ ಹಂಚಿಕೆ ವೈಷಮ್ಯ: ವೃದ್ಧೆಯ ಕೊಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆ ಘೋಷಿಸಿದ ನ್ಯಾಯಾಲಯ

Date:

ಆಸ್ತಿ ಹಂಚಿಕೆ ವಿವಾದ ಹಾಗೂ ವೈಷಮ್ಯದ ಹಿನ್ನೆಲೆ ವೃದ್ಧೆಯೊಬ್ಬರನ್ನು ಕುತ್ತಿಗೆ ಸೀಳಿ ಕೊಲೆ ಮಾಡಿದ್ದ ಆರೋಪಿಗಳಿಗೆ ಶಿವಮೊಗ್ಗದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 30,000 ದಂಡ ವಿಧಿಸಿ ತೀರ್ಪು ನೀಡಿದೆ.

ಶಿವಮೊಗ್ಗ ತಾಲೂಕಿನ ಸುತ್ತುಕೋಟೆ ಗ್ರಾಮದ ಹನುಮಂತ್ ನಾಯ್ಕ್ (48) ಶಿಕ್ಷೆಗೆ ಒಳಗಾದ ಆರೋಪಿಗಳು
ಆರೋಪಿ ಹನುಮಂತ ನಾಯ್ಕ್ ತನ್ನ ಮನೆಯ ಭಾಗವೊಂದರಲ್ಲಿ ಜ್ಯೋತಿ ಬಾಯಿ (35) ಎಂಬುವರು ಉಳಿದುಕೊಳ್ಳಲು ನೀಡಿದ್ದ. ಇತ್ತ ಆಸ್ತಿ ಹಂಚಿಕೆ ವಿಚಾರದಲ್ಲಿ ರತ್ನಾಬಾಯಿ (60) ಎಂಬುವರು ತಮಗೆ ಮೋಸ ಮಾಡಿದ್ದಾರೆ ಹಾಗೂ ಊರಿನವರ ಮುಂದೆ ನಿಂದಿಸುತ್ತಿದ್ದಾರೆ ಎಂದು ಜ್ಯೋತಿ ಬಾಯಿ ಮತ್ತು ಹನುಮಂತ್ ನಾಯ್ಕ್ ವೈಷಮ್ಯ ಹೊಂದಿದ್ದರು.
2023ರ ಮಾರ್ಚ್ 15ರ ರಾತ್ರಿ ರತ್ನಾಬಾಯಿ ಅವರು ಹನುಮಂತ ನಾಯ್ಕ್ ಮನೆಯ ಮುಂದಿನ ಕಟ್ಟೆಯ ಮೇಲೆ ಮಲಗಿದ್ದರು.

ಆಗ ಆರೋಪಿ ಹನುಮಂತ ನಾಯ್ಕ್‌ ಚಾಕುವಿನಿಂದ ಅವರ ಕುತ್ತಿಗೆ ಕೋಯ್ದು ಕೊಲೆ ಮಾಡಿದ್ದ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ಇನ್‌ಸ್ಪೆಕ್ಟರ್ ತಿಪ್ಪೆಸ್ವಾಮಿ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

ಅಪರಾಧ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಅಭಯ್ ಧನಪಾಲ್ ಚೌಗಲ ಅವರು ಜೂನ್ 24ರಂದು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಮಮತಾ ಬಿ.ಎಸ್. ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...