Monday, August 10, 2026
Monday, August 10, 2026

World Blood Donor Day 92 ನೇ ಬಾರಿಗೆ ರಕ್ತದಾನ ಮಾಡಿದ ದಾನಿ ಸುರೇಶ್ ಅವರಿಗೆ ಆತ್ಮೀಯ ಸನ್ಮಾನ

Date:

World Blood Donor Day ವಿಶ್ವ ರಕ್ತದಾನಿಗಳ ದಿನಾಚರಣೆ–2026ರ ಅಂಗವಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆ, ಬೆಂಗಳೂರು ವತಿಯಿಂದ ಆಯೋಜಿಸಲಾದ ರಾಜ್ಯಮಟ್ಟದ ಸಮಾರಂಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಎ.ಎಂ. ಸುರೇಶ್ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಅಪರೂಪದ AB-ನೆಗಟಿವ್ ರಕ್ತದ ಗುಂಪಿನ ದಾನಿಯಾಗಿರುವ ಎ.ಎಂ. ಸುರೇಶ್ ಅವರು ಇದುವರೆಗೆ 92 ಬಾರಿ ರಕ್ತದಾನ ಮಾಡುವ ಮೂಲಕ ಅನೇಕ ಜೀವಗಳನ್ನು ಉಳಿಸಲು ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ನಿರಂತರ ಹಾಗೂ ನಿಸ್ವಾರ್ಥ ರಕ್ತದಾನ ಸೇವೆಯನ್ನು ಪರಿಗಣಿಸಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಈ ಗೌರವವನ್ನು ನೀಡಿ ಸನ್ಮಾನಿಸಿದೆ.

ಈ ಸಾಧನೆ ಅನೇಕ ಯುವಕರು ಹಾಗೂ ರಕ್ತದಾನಿಗಳಲ್ಲಿ ಜಾಗೃತಿ ಮತ್ತು ಸೇವಾ ಮನೋಭಾವವನ್ನು ಬೆಳೆಸುವ ಸ್ಪೂರ್ತಿದಾಯಕ ಉದಾಹರಣೆಯಾಗಿದೆ. ಸುರೇಶ್ ಅವರ ರಕ್ತದಾನದ ಸೇವೆ ಶೀಘ್ರದಲ್ಲೇ ಶತಕದ ಮೈಲಿಗಲ್ಲು ತಲುಪಲಿ ಎಂದು ಶುಭಾಶಯಗಳು ವ್ಯಕ್ತವಾಗಿವೆ.

World Blood Donor Day ರಾಜ್ಯಮಟ್ಟದ ಪ್ರಶಸ್ತಿ ಸ್ವೀಕರಿಸಿದ ಎ.ಎಂ. ಸುರೇಶ್ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪರವಾಗಿ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...