ರಸಗೊಬ್ಬರಗಳ ಕೊರತೆ, ಸಮರ್ಪಕ ಬಳಕೆ ಹಾಗೂ ಪರ್ಯಾಯ ವ್ಯವಸ್ಥೆಗಳ ಕುರಿತು ರೈತರಿಗೆ ಮಾಹಿತಿ ನೀಡುವ ಉದ್ದೇಶದಿಂದ ಜೂನ್ 30, ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗದ ನವಿಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶೇಷ ಕಾರ್ಯಾಗಾರ ಆಯೋಜಿಸಲಾಗಿದೆ.
ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ಬೆಂಗಳೂರು ಹಾಗೂ ಜಿಲ್ಲಾ ಕೃಷಿಕ ಸಮಾಜದ ಆಶ್ರಯದಲ್ಲಿ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಮತ್ತು ಕೃಷಿ ತಂತ್ರಜ್ಞರ ಸಂಸ್ಥೆಯ ಸಹಯೋಗದಲ್ಲಿ ಈ ಕಾರ್ಯಾಗಾರ ನಡೆಯಲಿದೆ.
ಕಾರ್ಯಾಗಾರದಲ್ಲಿ ಕೃಷಿ ವಿಜ್ಞಾನಿಗಳು ಹಾಗೂ ತಂತ್ರಜ್ಞರು ರಸಗೊಬ್ಬರಗಳ ಲಭ್ಯತೆ, ಸಮರ್ಪಕ ಬಳಕೆ, ಪರ್ಯಾಯ ಪೋಷಕಾಂಶ ನಿರ್ವಹಣೆ ಸೇರಿದಂತೆ ರೈತರಿಗೆ ಅಗತ್ಯವಾದ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ.
ಜಿಲ್ಲೆಯ ರೈತರು ಹಾಗೂ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಜಿಲ್ಲಾ ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ವಿಜಿ ಶ್ರೀಧರ (ವರದಾಮೂಲ) ಮನವಿ ಮಾಡಿದ್ದಾರೆ.
