ಶಿವಮೊಗ್ಗ ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ, ಬಂಕಿಮ ಚಂದ್ರ ಚಟರ್ಜಿ ರವರ ಜನ್ಮ ಜಯಂತಿ ಪ್ರಯುಕ್ತ ಹಾಗೂ ವಂದೇ ಮಾತರಂ ಗೀತೆಗೆ 151 ವರ್ಷ ತುಂಬಿದ ಸವಿ ನೆನಪಿಗಾಗಿ, ಶಿವಮೊಗ್ಗದ ಖ್ಯಾತ ಗಾಯಕರದ ಪೃಥ್ವಿ ಗೌಡ, ಅವರು ವಂದೇ ಮಾತರಂ ಗೀತೆಯನ್ನು ಹಾಡುವುದರ ಮೂಲಕ ಬಂಕಿಮ್ ಚಂದ್ರ ಚಟರ್ಜಿ ಅವರ ಜನ್ಮ ಜಯಂತಿಯನ್ನು ಆಚರಿಸಲಾಯಿತು ಹಾಗೂ ಶಾಲೆಯ ವತಿಯಿಂದ ಪೃಥ್ವಿ ಗೌಡ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಪೂಜಾ ನಾಗರಾಜ್ ಪರಿಸರ , ಡಾ.ನಾಗರಾಜ್ ಪರಿಸರ, ಮುಖ್ಯೋಪಾಧ್ಯಾಯರಾದ ಮಂಜುನಾಥ್ ಎಲ್ ಎನ್, ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ರಾಯಲ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಬಂಕಿಮ್ ಚಂದ್ರ ಚಟರ್ಜಿ ಜನ್ಮದಿನಾಚರಣೆ
Date:
