Wednesday, August 12, 2026
Wednesday, August 12, 2026

ನಮ್ಮೂರ ಬಳಗದಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Date:

ರಾಜ್ಯದ ರಾಜಧಾನಿ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜಯಂತೋತ್ಸವವನ್ನು ನಮ್ಮೂರ ಬಳಗದ ವತಿಯಿಂದ ಅಲ್ಲಮಪ್ರಭು ಮೈದಾನ, ಫ್ರೀಡಂ ಪಾರ್ಕ್ ನಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ , ಸಿಹಿ ವಿತರಿಸಿ ಆಚರಿಸಲಾಯಿತು

ಕಾರ್ಯಕ್ರಮವನ್ನು ಉದ್ದೇಶಿಸಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಮ್. ಶ್ರೀಕಾಂತ್ ರವರು ಮಾತನಾಡಿ ವಿಜಯನಗರ ಸಾಮ್ರಾಜ್ಯದ ಧೀಮಂತ ನಾಯಕ, ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರು ಎಲ್ಲಾ ಜಾತಿ, ಧರ್ಮ, ಮತ, ಪಂಥ, ಭಾಷೆಯ ಜನರಿಗೆ ಆಶ್ರಯ ನೀಡಿ, ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿರುವ ಬೆಂಗಳೂರು ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯ ಫಲ. ಕೆಂಪೇಗೌಡರ ಜನಪರವಾದ ಜಾತ್ಯತೀತ ಆಡಳಿತ ನಮಗೆ ಮಾದರಿ. ಇವರ ದೂರದೃಷ್ಟಿಯ ಮತ್ತು ಸಮುದಾಯ ಕೇಂದ್ರಿತ ಆಡಳಿತದ ವೈಭವ ಇಂದಿನ ಪೀಳಿಗೆಗೆ ಪ್ರೇರಣೆಯಾಗಿದೆ. ಭವ್ಯ ಪರಂಪರೆಯ ಗೌರವ ಹಾಗೂ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಮೂಡಿಸಲು ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು

ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ .ರಂಗನಾಥ್, ಗೌರವ ಸಂಚಾಲಕರಾದ ಹೆಚ್ ಪಾಲಾಕ್ಷಿ ,ಸಿ ರವಿ ,ಜಿ.ಡಿ ಮಂಜುನಾಥ್, ಹಾಪ್ ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ, ಸಿಟಿ ಬ್ಯಾಂಕ್ ನಿರ್ದೇಶಕ ಬಿ ಲೋಕೇಶ್, ಸಂಚಾಲಕರಾದ ಹೆಚ್‌.ಪಿ ಗಿರೀಶ್, , ಚಂದ್ರು ಗೆಡ್ಡೆ, ಗುರುಪ್ರಸಾದ್, ಎಸ್ ಬಸವರಾಜ್, ವಿನಯ್, ಸುಬ್ರಮಣಿ,ಕುಮಾರ್, ಕೇಬಲ್ ಲೋಕೇಶ್, ಕೆ ಎಲ್ ಪವನ್, ರಾಜೇಶ್ ಮಂದಾರ, ಮಿಥುನ್, ಪುಷ್ಪಕ್ ಕುಮಾರ್ ,ಶಿವಮೊಗ್ಗ ವಿರೂಪಾಕ್ಷ, ಭವಾನಿ ರಾವ್, ಹಾಗೂ ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...