Monday, June 29, 2026
Monday, June 29, 2026

ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಮಂದಿ ದಾನಿಗಳು ಭಾಗಿ

Date:

ಶಿವಮೊಗ್ಗ ನಗರದ ಗೋಂಧಿಚಟ್ನಹಳ್ಳಿಯಲ್ಲಿ ಶ್ರೀ ಮಾರಿಕಾಂಬಾ ಫೈನಾನ್ಸ್, ಗೋಂಧಿಚಟ್ನಹಳ್ಳಿ ಹಾಗೂ ಆಶಾಜ್ಯೋತಿ ಸ್ವಯಂ ಪ್ರೇರಿತ ರಕ್ತ ಕೇಂದ್ರ ಮತ್ತು ಶ್ರೀ ವೈಷ್ಣವಿ ಚಾರಿಟೇಬಲ್ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.
ಸಂಘದ ಉದ್ಘಾಟನೆ ಸಮಾರಂಭದ ಸವಿನೆನಪಿಗಾಗಿ ಆಯೋಜಿಸಿದ್ದ ಈ ರಕ್ತದಾನ ಶಿಬಿರದಲ್ಲಿ ಸುಮಾರು 100ಕ್ಕೂ ಹೆಚ್ಚು ಮಂದಿ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಗೆ ಕೈಜೋಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥ ಕೃಷ್ಣಮೂರ್ತಿ, ರಕ್ತದಾನವು ಜೀವ ಉಳಿಸುವ ಮಹತ್ವದ ಕಾರ್ಯವಾಗಿದ್ದು, ಪ್ರತಿಯೊಬ್ಬರೂ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಇಂತಹ ಶಿಬಿರಗಳು ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಘದ ಕಾರ್ತಿಕ್, ಕಣ್ಣನ್, ಅಂಬರೀಶ್, ಶಂಕರ್, ಸೇಲ್ವಕುಮಾರ್ ಸೇರಿದಂತೆ ಹಲವು ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

International Anti-Drug Day ಕಳೆದ ಆರು ತಿಂಗಳಲ್ಲಿ ಸು.₹ 25 ಲಕ್ಷ ಮೌಲ್ಯದ ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ- ಬಿ.ನಿಖಿಲ್

International Anti-Drug Day ಶಿವಮೊಗ್ಗ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಗಾಂಜಾ ಸೇರಿದಂತೆ...

B.Y. Raghavendra ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಇಂದಿನ ಮತ್ತು ಮುಂದಿನ ಪೀಳಿಗೆಗೆ ಸದಾ ಆದರ್ಶಪ್ರಾಯ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ...

S.N. Channabasappa ಮಾಚೇನಹಳ್ಳಿ ಕೈಗಾರಿಕಾ ವಲಯದ ವಿದ್ಯುತ್ ಸಮಸ್ಯೆ ನಿವಾರಣೆ ಬಗ್ಗೆ ಶಾಸಕ ಚನ್ನಿ ಅವರಿಂದ ಮಹತ್ವದ ಸಭೆ

S.N. Channabasappa ಮಾಚೇನಹಳ್ಳಿ ಕೈಗಾರಿಕಾ ವಲಯದ ವಿದ್ಯುತ್ ಸಮಸ್ಯೆ ನಿವಾರಣೆಗೆ ‘ಕರ್ತವ್ಯ...

Rotary Shivamogga ಪೋಲಿಯೊ ಮುಕ್ತ ಭಾರತ ಅಭಿಯಾನದಲ್ಲಿ ರೋಟರಿ ಸಂಸ್ಥೆಯದ್ದು ಮಹತ್ವದ ಪಾತ್ರ- ವಸಂತ ಹೋಬಳಿದಾರ್

Rotary Shivamogga ಪೋಲಿಯೋ ಹನಿಯನ್ನು ಒಂದರಿಂದ ಐದು ವರ್ಷದ ಒಳಗಿನ ಮಕ್ಕಳಿಗೆ...