S.N. Channabasappa ಮಾಚೇನಹಳ್ಳಿ ಕೈಗಾರಿಕಾ ವಲಯದ ವಿದ್ಯುತ್ ಸಮಸ್ಯೆ ನಿವಾರಣೆಗೆ ‘ಕರ್ತವ್ಯ ಭವನ’ದಲ್ಲಿ ಮಹತ್ವದ ಸಭೆ! ನಡೆಯಿತು. ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಸಭೆಯಲ್ಲಿ ಪ್ರಮುಖ ಸಮಸ್ಯೆಗಲಕ ಬಗ್ಗೆ ಚರ್ಚಿಸಿದರು.
ಶಿವಮೊಗ್ಗದ ಆರ್ಥಿಕ ಶಕ್ತಿಯಾಗಿರುವ ಹಾಗೂ ಸಾವಿರಾರು ಜನರಿಗೆ ಉದ್ಯೋಗ ನೀಡಿರುವ ಕೈಗಾರಿಕೆಗಳ ಅಭಿವೃದ್ಧಿಗೆ ಪೂರಕ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಇಂದು ಬೆಳಿಗ್ಗೆ ಶಾಸಕರ ಅಧಿಕೃತ ಕಚೇರಿಯಾದ ‘ಕರ್ತವ್ಯ ಭವನ’ದಲ್ಲಿ ಮಾಚೇನಹಳ್ಳಿ ಕೈಗಾರಿಕಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಸಭೆ ನಡೆಯಿತು.
ಸಭೆಯಲ್ಲಿ ಪ್ರಮುಖವಾಗಿ ಕೈಗಾರಿಕಾ ವಲಯದಲ್ಲಿ ಎದುರಾಗುತ್ತಿರುವ ವಿದ್ಯುತ್ ವ್ಯತ್ಯಯ, ಹಳೆಯದಾದ ಮೂಲಸೌಕರ್ಯಗಳ ತೊಂದರೆ ಹಾಗೂ ಇಂಧನ ಇಲಾಖೆಯಿಂದ ಕೈಗೊಳ್ಳಬೇಕಾದ ತುರ್ತು ಸುಧಾರಣೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಕೈಗಾರಿಕೋದ್ಯಮಿಗಳ ಸಮಸ್ಯೆಗಳಿಗೆ ಮೆಸ್ಕಾಂ ಮತ್ತು ಇಲಾಖೆಯ ಉನ್ನತಾಧಿಕಾರಿಗಳ ಮೂಲಕ ಶೀಘ್ರವಾಗಿ ಶಾಶ್ವತ ಪರಿಹಾರ ಕಲ್ಪಿಸಲು ಪ್ರಾಮಾಣಿಕ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರು ತಿಳಿಸಿದರು.
S.N. Channabasappa ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ರುದ್ರೇಗೌಡರು, ಮಾಚೇನಹಳ್ಳಿ ಕೈಗಾರಿಕಾ ಘಟಕ ಸಂಘದ ಪ್ರಮುಖ ಪದಾಧಿಕಾರಿಗಳು, ಉದ್ಯಮಿಗಳು ಉಪಸ್ಥಿತರಿದ್ದರು.
