Monday, June 29, 2026
Monday, June 29, 2026

ಸಿಇಟಿಯಲ್ಲಿ ಕಡಿಮೆ ಅಂಕ : ನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿಯ ಸಾವು

Date:

ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ‌ ನಡೆದಿದೆ. 20 ದಿನಗಳ ಹಿಂದೆ ಕಳೆನಾಶಕ ಕುಡಿದಿದ್ದ ವಿದ್ಯಾರ್ಥಿ ಇದೀಗ ಚಿಕಿತ್ಸೆ ಪಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
18 ವರ್ಷದ ಜಯಂತ್‌ ಎಂಬ ವಿದ್ಯಾರ್ಥಿ ಮೃತ ದುರ್ದೈವಿ, ಈತ ಶಿಕಾರಿಪುರ ಪಟ್ಟಣದ ವಿನಾಯಕನಗರ ವಾಸಿ ಖಾಸಗಿ ಬಸ್ ಏಜೆಂಟ್ ಹಾಲೇಶ್ ಅವರ ಪುತ್ರ ಕಳೆದ ಜೂನ್ 6ರಂದು ಹೊರಬಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶದಲ್ಲಿ ಈತನಗೆ ಕಡಿಮೆ ಮಾರ್ಕ್ ಬಂದಿತ್ತು. ಈ ಕಾರಣಕ್ಕೆ ವಿದ್ಯಾರ್ಥಿ ಮನೆಯಲ್ಲಿದ್ದ ಕೀಟನಾಶಕ ಸೇವಿಸಿದ್ದ ಎನ್ನಲಾಗಿದೆ.
ಆನಂತರ ವಿದ್ಯಾರ್ಥಿಯನ್ನು ಪಟ್ಟಣದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೆ ಇದ್ದಾಗ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ಧಾನೆ. ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

International Anti-Drug Day ಕಳೆದ ಆರು ತಿಂಗಳಲ್ಲಿ ಸು.₹ 25 ಲಕ್ಷ ಮೌಲ್ಯದ ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ- ಬಿ.ನಿಖಿಲ್

International Anti-Drug Day ಶಿವಮೊಗ್ಗ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಗಾಂಜಾ ಸೇರಿದಂತೆ...

B.Y. Raghavendra ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಇಂದಿನ ಮತ್ತು ಮುಂದಿನ ಪೀಳಿಗೆಗೆ ಸದಾ ಆದರ್ಶಪ್ರಾಯ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ...

S.N. Channabasappa ಮಾಚೇನಹಳ್ಳಿ ಕೈಗಾರಿಕಾ ವಲಯದ ವಿದ್ಯುತ್ ಸಮಸ್ಯೆ ನಿವಾರಣೆ ಬಗ್ಗೆ ಶಾಸಕ ಚನ್ನಿ ಅವರಿಂದ ಮಹತ್ವದ ಸಭೆ

S.N. Channabasappa ಮಾಚೇನಹಳ್ಳಿ ಕೈಗಾರಿಕಾ ವಲಯದ ವಿದ್ಯುತ್ ಸಮಸ್ಯೆ ನಿವಾರಣೆಗೆ ‘ಕರ್ತವ್ಯ...

Rotary Shivamogga ಪೋಲಿಯೊ ಮುಕ್ತ ಭಾರತ ಅಭಿಯಾನದಲ್ಲಿ ರೋಟರಿ ಸಂಸ್ಥೆಯದ್ದು ಮಹತ್ವದ ಪಾತ್ರ- ವಸಂತ ಹೋಬಳಿದಾರ್

Rotary Shivamogga ಪೋಲಿಯೋ ಹನಿಯನ್ನು ಒಂದರಿಂದ ಐದು ವರ್ಷದ ಒಳಗಿನ ಮಕ್ಕಳಿಗೆ...