Friday, August 14, 2026
Friday, August 14, 2026

B.Y. Raghavendra ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಇಂದಿನ ಮತ್ತು ಮುಂದಿನ ಪೀಳಿಗೆಗೆ ಸದಾ ಆದರ್ಶಪ್ರಾಯ- ಬಿ.ವೈ.ರಾಘವೇಂದ್ರ

Date:

B.Y. Raghavendra ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ “ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ” ಮಹೋತ್ಸವ ಹಮ್ಮಿಕೊಳ್ಳಲಾಗಿತ್ತು. ಸಂಸದ ಬಿ.ವೈ.ರಾಘವೇಂದ್ರ ಅವರು ಅತಿಥಿಗಳಾಗಿ
ಭಾಗವಹಿಸಿದ್ದರು.

ನಾಡಿನ ಹೆಮ್ಮೆಯ ಕ್ರಾಂತಿಕಾರಿ ಧೀಮಂತ ನಾಯಕನಿಗೆ ಈ ಸಂದರ್ಭದಲ್ಲಿ ಪುಷ್ಪಾರ್ಚನೆ ಮೂಲಕ ಭಕ್ತಿಪೂರ್ವಕ ನಮನಗಳನ್ನು ಎಲ್ಲರೂ ಸಲ್ಲಿಸಿದರು.

ಅಪ್ರತಿಮ ಆಡಳಿತಗಾರ, ದೂರದರ್ಶಿ ಹಾಗೂ ಬೆಂಗಳೂರು ಮಹಾನಗರದ ನಿರ್ಮಾತೃಗಳಾದ ನಾಡಪ್ರಭು ಶ್ರೀ ಕೆಂಪೇಗೌಡರ ಕೊಡುಗೆಗಳು ಇಡೀ ಕರ್ನಾಟಕದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತದ್ದಾಗಿದೆ. ಅವರ ಜನಪರ ಆಡಳಿತ ಪದ್ಧತಿ, ಕೆರೆ-ಕಟ್ಟೆಗಳ ನಿರ್ಮಾಣ, ಪರಿಸರ ಕಾಳಜಿ ಹಾಗೂ ದೂರದೃಷ್ಟಿಯ ನಗರಾಭಿವೃದ್ಧಿ ಯೋಜನೆಗಳು ಇಂದಿಗೂ ಮತ್ತು ಮುಂದಿನ ಪೀಳಿಗೆಗೂ ಸದಾ ಆದರ್ಶಪ್ರಾಯ ಮತ್ತು ಮಾರ್ಗದರ್ಶಕವಾಗಿವೆ ಎಂದು ಸಂಸದ ರಾಘವೇಂದ್ರ ಅವರು ಕೆಂಪೇಗೌಡರ ಗುಣಗಾನ ಮಾಡಿದರು.

B.Y. Raghavendra ಶ್ರೀ ಕೆಂಪೇಗೌಡರ ಸದಾಶಯಗಳ ಹಾದಿಯಲ್ಲಿ ನಮ್ಮ ಶಿವಮೊಗ್ಗ ಜಿಲ್ಲೆ ಹಾಗೂ ಇಡೀ ನಾಡಿನ ಸರ್ವತೋಮುಖ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಈ ಸಂದರ್ಭದಲ್ಲಿ ಬಿ.ವೈ.ರಾಘವೇಂದ್ರ ಕರೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...