Monday, July 13, 2026
Monday, July 13, 2026

S.N. Channabasappa ನಗರದ ಜಲಮೂಲವಾಗಿರುವ ಚಾನಲ್ ಗಳನ್ನು ಸ್ವಚ್ಛವಾಗಿಡುವುದು ಇಲಾಖೆಯ ಹೊಣೆ- ಎಸ್.ಎನ್.ಚನ್ನಬಸಪ್ಪ

Date:

S.N. Channabasappa ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಹಿನ್ನೆಲೆ, ಶಿವಮೊಗ್ಗ ನಗರದ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಶಾಸಕರ ಅಧಿಕೃತ ಕಚೇರಿಯಾದ ‘ಕರ್ತವ್ಯ ಭವನ’ದಲ್ಲಿ ಮಹಾನಗರ ಪಾಲಿಕೆ ಹಾಗೂ ತುಂಗಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳೊಂದಿಗೆ ನಡೆದ ಜಂಟಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹಾನಗರ ಪಾಲಿಕೆ ಮತ್ತು ತುಂಗಾ ಮೇಲ್ದಂಡೆ ಯೋಜನಾ ಮಂಡಳಿಯ ನಡುವಿನ ಸಮನ್ವಯದ ಕೊರತೆಯಿಂದ ಸಾರ್ವಜನಿಕ ಕಾಮಗಾರಿಗಳಿಗೆ ಯಾವುದೇ ಅಡ್ಡಿಯಾಗಬಾರದು. ಎರಡೂ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಿ, ಜನರಿಗೆ ತ್ವರಿತ ಸೇವೆ ಒದಗಿಸಬೇಕು ಎಂದು ಶಾಸಕರು ನಿರ್ದೇಶನ ನೀಡಿದರು.

ನಗರದ ವಿವಿಧ ಭಾಗಗಳಲ್ಲಿ ಹಾದುಹೋಗುವ ಚಾನಲ್‌ಗಳ ಅಭಿವೃದ್ಧಿ ಹಾಗೂ ಅವುಗಳ ನಿರಂತರ ಸ್ವಚ್ಛತೆ ಕುರಿತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಸಲಾಯಿತು. ಮಳೆ ನೀರಿನ ಸರಾಗ ಹರಿವು ಹಾಗೂ ನಗರ ಸ್ವಚ್ಛತೆಯನ್ನು ಕಾಪಾಡುವ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

S.N. Channabasappa ಸಭೆಯಲ್ಲಿ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣ ಹಾಗೂ ನಗರದ ದೈನಂದಿನ ನೀರು ಪೂರೈಕೆಯ ಸ್ಥಿತಿಗತಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕ ಚನ್ನಬಸಪ್ಪ, ಮಳೆಯ ಕೊರತೆಯಿಂದ ಉಂಟಾಗಬಹುದಾದ ಜಲಕ್ಷಾಮವನ್ನು ಎದುರಿಸಲು ವೈಜ್ಞಾನಿಕ ನೀರು ಪೂರೈಕೆ ಯೋಜನೆ ರೂಪಿಸಿ, ಅಗತ್ಯ ತಾಂತ್ರಿಕ ಹಾಗೂ ತುರ್ತು ಕ್ರಮಗಳನ್ನು ತಕ್ಷಣ ಜಾರಿಗೊಳಿಸುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರು, ಮುಖ್ಯ ಇಂಜಿನಿಯರ್‌ಗಳು ಹಾಗೂ ತುಂಗಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...