ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಶಿವಮೊಗ್ಗ ಜಿಲ್ಲಾ ಸರ್ವೋದಯ ಮಂಡಳಿ ತುಂಬ ಸಕ್ರಿಯವಾಗಿದ್ದು, ಹಲವಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಪೂರೈಸಿದೆ ಅಲ್ಲದೆ ವಿಶೇಷವಾಗಿ ರಾಜ್ಯಮಟ್ಟದ ಮತ್ತು ರಾಷ್ಟ್ರಮಟ್ಟದ ಸಮ್ಮೇಳನಗಳನ್ನು ಆಯೋಜಿಸಿ ಗಾಂಧಿಜಿಯವರ ತತ್ವ ಸಿದ್ಧಾಂತವನ್ನು ಯುವಜನರಲ್ಲಿ ಬಿತ್ತುವ ಕೆಲಸವನ್ನು ಯಶಸ್ವಿಯಾಗಿ ಮಾಡಿದೆ ಎಂದು ರಾಜ್ಯ ಸರ್ವೋದಯ ಮಂಡಳಿಯ ನಿಕಟ ಪೂರ್ವ ಅಧ್ಯಕ್ಷರಾದ ಡಾ. ಎಚ್ಎಸ್ ಸುರೇಶ್ ತಿಳಿಸಿದ್ದಾರೆ. ಅವರು ವನಿತಾ ವಿದ್ಯಾಲಯದಲ್ಲಿ ಜಿಲ್ಲಾ ಸರ್ವೋದಯ ಮಂಡಳಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಇದೇ ಸಂದರ್ಭದಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರವನ್ನು ಪ್ರೇರಣಾ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಎಂ ಎನ್ ವೆಂಕಟೇಶ್ ಅವರು ನೀಡಿ, ಬಾಲ್ಯದಲ್ಲಿ ತಾವು ಅನುಭವಿಸಿದ ಕಷ್ಟ ಕಾರ್ಪಣ್ಯಗಳು ಇಂದಿನ ಮಕ್ಕಳಲ್ಲಿ ಹೋಗಲಾಡಿಸಲು ಎಲ್ಲರೂ ಸಹಕರಿಸಬೇಕು ಎಂದರು.
ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವನಿತಾ ವಿದ್ಯಾಲಯದ ಮೂರು ವಿದ್ಯಾರ್ಥಿಗಳಿಗೆ ಡಾ. ಉಷಾ ರಮೇಶ್ ಅವರು ನಗದು ಪ್ರೋತ್ಸಾಹ ಧನವನ್ನು ನೀಡುವುದರ ಮೂಲಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನೆರವೇರಿಸಿ ಕೊಟ್ಟರು. ಈ ಸಂದರ್ಭದಲ್ಲಿ ಅವರು ಮಾತನಾಡಿ ಪ್ರತಿಭೆ ಎಲ್ಲರ ಮಕ್ಕಳಲ್ಲೂ ಇದೆ. ಅದನ್ನು ಹೊರ ತರುವ ಕಾರ್ಯ ನಮ್ಮ ಶಿಕ್ಷಕರು ಮಾಡಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಂಗವಾಗಿ ಮತ್ತೊಂದು ಮಹತ್ವಪೂರ್ಣ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿತ್ತು. ಅದೆಂದರೆ ಕರ್ನಾಟಕ ಬ್ಯಾಂಕ್ ಅಧಿಕಾರಿ ಎನ್ ಎಸ್ ಶ್ರೀನಿವಾಸಮೂರ್ತಿ ಅವರು ರಚಿಸಿದ ಶಿಲ್ಪಕಲಾ ದೇವಾಲಯಕ್ಕೆ ದಾರಿ ಎಂಬ ಎಂಟನೇ ಸಂಪುಟದ ಕೃತಿ ಲೋಕಾರ್ಪಣೆ ಕಾರ್ಯಕ್ರಮವು ನಡೆಯಿತು ಪುಸ್ತಕವನ್ನು ಬಿಡುಗಡೆ ಮಾಡಿದ ಕರ್ನಾಟಕ ಸಂಘದ ಅಧ್ಯಕ್ಷರಾದ ಪ್ರೊಫೆಸರ್ ಹೆಚ್ ಆರ್ ಶಂಕರ್ ನಾರಾಯಣ ಶಾಸ್ತ್ರಿ ಯವರು ಮಾತನಾಡಿ ಕರ್ನಾಟಕದಲ್ಲಿ ಸುಮಾರು 68,000ಕ್ಕೂ ಹೆಚ್ಚು ದೇವಾಲಯಗಳಿದ್ದು, ಶ್ರೀಯುತ ಶ್ರೀನಿವಾಸಮೂರ್ತಿ ಅವರು ಇದುವರೆಗೂ 1800 ದೇವಾಲಯಗಳ ಪರಿಚಯವನ್ನು ತಮ್ಮ ಕೃತಿಗಳ ಮೂಲಕ ಮಾಡಿಕೊಟ್ಟಿರುವುದು ಒಂದು ಅಚ್ಚರಿಯ ವಿಷಯ ಎಂದು ಶ್ಲಾಘಿಸಿದರು. ದೇವಾಲಯಗಳಿಗೆ ಹೋಗಿ ಬಂದರೆ ಸಾಲದು ಅದರ ಇತಿಹಾಸ, ಪೌರಾಣಿಕ ಹಿನ್ನೆಲೆ, ಕಲೆ ಮತ್ತು ಸಂಸ್ಕೃತಿಯನ್ನು ಪರಿಚಯ ಮಾಡಿಕೊಳ್ಳುವುದು ಅತ್ಯಂತ ಅವಶ್ಯಕ ಈ ನಿಟ್ಟಿನಲ್ಲಿ ಲೇಖಕರು ಪ್ರತಿಯೊಂದು ವಿಷಯವನ್ನು ವಿಷದ ಪಡಿಸಿ ಸುಂದರವಾದ ಛಾಯಾಚಿತ್ರಗಳನ್ನು ಮುದ್ರಿಸಿ, ಉತ್ತಮ ಪುಸ್ತಕವನ್ನು ಕನ್ನಡ ಸಾಹಿತ್ಯಕ್ಕೆ ನೀಡಿದ್ದಾರೆ. ಅವರ ಪ್ರಯತ್ನ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸರ್ವೋದಯ ಮಂಡಳಿ ಅಧ್ಯಕ್ಷರಾದ ಆರ್. ಮನೋಹರ್ ರವರು ತಮ್ಮ ಈ ಸಂಸ್ಥೆ ಮುಂದಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚು ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರಕಟಿಸಿದರು.
ಪ್ರಾರಂಭದಲ್ಲಿ ಕುಮಾರಿ ಸಂಜನಾ ತಿವಾರಿ ಪ್ರಾರ್ಥನೆ ಮಾಡಿದರು ಸ್ವಾಗತಿಸಿದರು ರೋಟೆರಿಯನ್ ವಿಜಯಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಮುಂದಿನ ದಿನಗಳಲ್ಲಿ ದಕ್ಷಿಣ ಭಾರತದ ಸರ್ವೋದಯ ಮಂಡಳಿಯ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಶಿಕ್ಷಕರಾದ
ಸಂತೋಷ್ ಮತ್ತು ಸದಾನಂದ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕೊನೆಯಲ್ಲಿ ಶ್ರೀಮತಿ ಆರತಿ ತಿವಾರಿ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾಂಕಿನ ಹಿರಿಯ ಅಧಿಕಾರಿಗಳು ಮತ್ತು ಸಾಹಿತ್ಯ ಸತ್ತರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಶಿವಮೊಗ್ಗದ ಸರ್ವೋದಯ ಮಂಡಳಿ ಘಟಕವು ರಾಜ್ಯದಲ್ಲೇ ಅತ್ಯಂತ ಕ್ರಿಯಾಶೀಲ- ಡಾ.ಎಸ್.ಹೆಚ್.ಸುರೇಶ್
Date:
