Monday, July 13, 2026
Monday, July 13, 2026

Women and Child Development Department ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನ

Date:

Women and Child Development Department ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2026-27ನೇ ಸಾಲಿನಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಲು 5 ರಿಂದ 18 ವರ್ಷದೊಳಗಿನ ಅರ್ಹ ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ.

ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಸೂಚಿತ ಕ್ಷೇತ್ರಗಳಲ್ಲಿ ಅಪ್ರತಿಮ ಪ್ರತಿಭೆ ಉಳ್ಳವರಾಗಿದ್ದು, ಅವರು ಸಾಧಿಸಿದ ಪ್ರತಿಭೆಯ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿರಬೇಕು.

ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಮಕ್ಕಳು ಕನಿಷ್ಠ 5 ವರ್ಷ ಕರ್ನಾಟಕ ರಾಜ್ಯದಲ್ಲಿ ವಾಸಿಸಿರಬೇಕು. ಈ ಬಗ್ಗೆ ಸ್ವಯಂ ದೃಢೀಕರಣ ಪತ್ರ ಸಲ್ಲಿಸುವುದು. ರಾಷ್ಟç, ರಾಜ್ಯ, ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿರುವ ಪ್ರಶಸ್ತಿ ಪಡೆದಿರುವ ಮಾಹಿತಿಯನ್ನು ಸಲ್ಲಿಸುವುದು.

Women and Child Development Department ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮಕ್ಕಳಿಗೆ ಪುನಃ ಪ್ರಶಸ್ತಿ ನೀಡಲು ಅವಕಾಶವಿರುವುದಿಲ್ಲ. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಪ್ರತಿ ಕ್ಷೇತ್ರಕ್ಕೆ ಇಬ್ಬರು ಮಕ್ಕಳಂತೆ ಒಟ್ಟು 8 ಮಕ್ಕಳಿಗೆ ರೂ. 10000/- ನಗದು ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಗುವುದು.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜು. 27 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...