Thursday, July 2, 2026
Thursday, July 2, 2026

ನೇರ ಸಂದರ್ಶನದ ಮೂಲಕ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ,ಒಳ್ಳೆಯ‌ ಪ್ರಯತ್ನ: ಹೆಚ್.ಎಂ.ಮಧು

Date:

ಉದ್ಯೋಗಾಕಾಂಕ್ಷಿಗಳಿಗೆ ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಜೂ. 30 ರಂದು ಏರ್ಪಡಿಸಲಾಗಿದ್ದ ನೇರ ಸಂದರ್ಶನ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಧು ಹೆಚ್.ಎಂ. ಭಾಗವಹಿಸಿ ಉದ್ಯೋಗದಾತರೊಂದಿಗೆ ಸಂವಾದ ನಡೆಸಿ, ಖಾಸಗಿ ಕಂಪನಿಗಳಲ್ಲಿರುವ ಖಾಲಿ ಹುದ್ದೆಗಳ ಕುರಿತು ಮಾಹಿತಿ ಪಡೆದರು. ಬಳಿಕ ಅಭ್ಯರ್ಥಿಗಳೊಂದಿಗೆ ಮಾತನಾಡಿದ ಅವರು, ಉದ್ಯೋಗ ವಿನಿಮಯ ಇಲಾಖೆ ಕೇವಲ ಯೋಜನೆಗಳ ಅನುಷ್ಠಾನಕ್ಕೆ ಸೀಮಿತವಾಗದೆ, ನೇರ ಸಂದರ್ಶನಗಳ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ದೊರೆಯುವಂತೆ ಪರಿಣಾಮಕಾರಿ ಸಹಕಾರ ನೀಡಬೇಕು ಎಂದು ತಿಳಿಸಿದರು.
ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಅರ್ಹರಾಗಿರುವ ಡಿಪ್ಲೊಮಾ ಹಾಗೂ ಪದವೀಧರರು ಅರ್ಜಿ ಸಲ್ಲಿಸಿ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆಗೆ ತಮ್ಮ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ಕರೆ ನೀಡಿದರು.
ಉದ್ಯೋಗಾಧಿಕಾರಿ ಮಂಜುನಾಥ ಕೆ. ಡಿ ಮಾತನಾಡಿ,ಯುವನಿಧಿ ನೋಂದಣಿಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆ ಹೊಂದಿರಬೇಕು ಹಾಗೂ https://sevasindhugs.karnataka.gov.in ವೆಬ್‌ಸೈಟ್ ನಲ್ಲಿ ತಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಕೊಂಡು ಹಾಗೂ ಪರಿಶೀಲನೆಗೆ ಬಾಕಿ ಉಳಿದಿರುವ ಅಭ್ಯರ್ಥಿಗಳು ಮಾತ್ರ ಸೂಚಿಸಲ್ಪಟ್ಟ ಇಲಾಖೆಯ ಕಚೇರಿಗಳಿಗೆ ತಮ್ಮ ಎಲ್ಲ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ಶೀಘ್ರವಾಗಿ ದೃಢೀಕರಿಸಿಕೊಳ್ಳುವಂತೆ ತಿಳಿಸಿದರು.
ಈಗಾಗಲೇ ನೋಂದಾಯಿಸಿಕೊಂಡು ಹಣ ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ತಿಂಗಳು 25ನೇ ದಿನಾಂಕದೊಳಗೆ ಸ್ವಯಂ-ಘೋಷಣೆಯನ್ನು ಮಾಡಿಕೊಳ್ಳಬೇಕಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 08182-255293 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಸೇವಾ ತೆರಿಗೆ: ಹತ್ತುವರ್ಷಗಳು.ಒಂದು ಅವಲೋಕನ.ಲೇ: ಆರ್.ಮನೋಹರ್.

Shivamogga News ಜುಲೈ 1, 2017 ರಂದು ಮಧ್ಯರಾತ್ರಿ ಹಳೆಯ ಸಂಸತ್ತಿನ...