Friday, July 3, 2026
Friday, July 3, 2026

ಎಲ್ಲರೂ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು- ಡಾ. ಅಪ್ರಮೇಯ

Date:

ಶಿವಮೊಗ್ಗದ ಅನುಪಿನಕಟ್ಟೆಯಲ್ಲಿರುವ ಶ್ರೀ ರಾಮಕೃಷ್ಣ ಗುರುಕುಲದಲ್ಲಿ ವಿಶ್ವ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ನಾರಾಯಣ ಹೃದಯಾಲಯದ ವೈದ್ಯ ಡಾ. ಅಪ್ರಮೇಯ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಎಲ್ಲರೂ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕಡೆ ಎಲ್ಲರೂ ಅತ್ಯಂತ ಕಾಳಜಿ ವಹಿಸಬೇಕಾಗಿರುವುದು ಇಂದಿನ ದಿನಮಾನಗಳಲ್ಲಿ ಅತ್ಯಂತ ಅಗತ್ಯವಾಗಿದೆ ಎಂದರು.
ಮಕ್ಕಳು ಸ್ವಚ್ಛತೆ ಕಾಪಾಡಿಕೊಳ್ಳುವ ಜೊತೆಗೆ ತಮ್ಮ ಆರೋಗ್ಯದ ಕಡೆ ಅತ್ಯಂತ ಕಾಳಜಿ ವಹಿಸಬೇಕು. ಕ್ರೀಡೆ ಜೊತೆಗೆ ನಮ್ಮ ದೈಹಿಕ ಆರೋಗ್ಯವನ್ನು ಸಹ ಕಾಪಾಡಿಕೊಂಡಲ್ಲಿ ಬೌದ್ಧಿಕ ಗುಣಮಟ್ಟ ಹೆಚ್ಚುತ್ತದೆ ಎಂದರು.
ಕಾರ್ಯಕ್ರಮದಲ್ಲಿ ರಾಮಕೃಷ್ಣ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶೋಭಾ ಆರ್. ವೆಂಕಟರಮಣ ಹಾಗೂ ಗುರುಕುಲದ ಮುಖ್ಯೋಪಾಧ್ಯಾಯರಾದ ಎ. ವೆಂಕಟೇಶ್ ಉಪಸ್ಥಿತರಿದ್ದರು.
ಡಾ. ಅಪ್ರಮೇಯ ಅವರಿಗೆ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು, ಹಾಗೂ ಅವರು ಮಕ್ಕಳೊಂದಿಗೆ ಸಂವಾದ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಸೇವಾ ತೆರಿಗೆ: ಹತ್ತುವರ್ಷಗಳು.ಒಂದು ಅವಲೋಕನ.ಲೇ: ಆರ್.ಮನೋಹರ್.

Shivamogga News ಜುಲೈ 1, 2017 ರಂದು ಮಧ್ಯರಾತ್ರಿ ಹಳೆಯ ಸಂಸತ್ತಿನ...