Saturday, July 4, 2026
Saturday, July 4, 2026

ಆತ್ಮಹತ್ಯೆಗೆ ಬಂದಿದ್ದ ಮಹಿಳೆಯನ್ನು ರಕ್ಷಿಸಿದ ಸಾರ್ವಜನಿಕರ ಸಮಯಪ್ರಜ್ಞೆ

Date:

ಕುಟುಂಬದ ಕ್ಷುಲ್ಲಕ ಕಾರಣದಿಂದ ಮನನೊಂದ ಮಹಿಳೆಯೊಬ್ಬರು ನಗರದ ವಾದಿ-ಏ-ಹುದಾ ಸಮೀಪದ ಹೊಸ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಬಂದಿದ್ದ ವೇಳೆ, ಸಾರ್ವಜನಿಕರು ಸಮಯಪ್ರಜ್ಞೆ ಪ್ರದರ್ಶಿಸಿ ಅವರನ್ನು ರಕ್ಷಿಸಿದ ಘಟನೆ ಶುಕ್ರವಾರ ಸಂಜೆ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೇತುವೆಯ ಮೇಲೆ ಮಹಿಳೆಯ ವರ್ತನೆ ಅನುಮಾನಾಸ್ಪದವಾಗಿ ಕಂಡ ಹಿನ್ನೆಲೆಯಲ್ಲಿ ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣ ಆಕೆಯೊಂದಿಗೆ ಮಾತುಕತೆ ನಡೆಸಿ ಆತ್ಮಹತ್ಯೆಯ ನಿರ್ಧಾರದಿಂದ ಹಿಂದೆ ಸರಿಯುವಂತೆ ಮನವೊಲಿಸಿದರು.

ಬಳಿಕ ಆಕೆಯ ಮನಸ್ಥಿತಿಯನ್ನು ಶಾಂತಗೊಳಿಸಿ, ಆತ್ಮಸ್ಥೈರ್ಯ ತುಂಬಿ ಸುರಕ್ಷಿತವಾಗಿ ಮನೆಗೆ ಕಳುಹಿಸಿದರು.

ಸಾರ್ವಜನಿಕರ ಮಾನವೀಯತೆ ಹಾಗೂ ಸಮಯೋಚಿತ ಮಧ್ಯಪ್ರವೇಶದಿಂದ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿದ್ದು, ಸ್ಥಳೀಯರು ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಮತದಾರರ ಪಟ್ಟಿ ಪರಿಷ್ಕರಣೆ, ಸಹಕರಿಸಲು ಜಿಲ್ಲಾ ಜನತೆಗೆ ಡೀಸಿ ಪ್ರಭುಲಿಂಗ ಕವಳಿಕಟ್ಟಿ ಮನವಿ

DC Shivamogga ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಸಿದ್ದಪಡಿಸಲು...

B.Y. Raghavendra ನಮ್ಮ ಸಹಕಾರಿ ಸಿಬ್ಬಂದಿ ಮತ್ತು ಆಡಳಿತ ಮಂಡಳಿ ಸದಸ್ಯರ ಆರೋಗ್ಯ ರಕ್ಷಣೆ ಅತ್ಯಂತ ಪ್ರಮುಖ : ಬಿ.ವೈ.ರಾಘವೇಂದ್ರ

B.Y. Raghavendra ಅಂತರರಾಷ್ಟ್ರೀಯ ಸಹಕಾರಿ ದಿನ–2026 ಹಾಗೂ ಕೇಂದ್ರ ಸಹಕಾರ ಸಚಿವಾಲಯ...