Monday, July 13, 2026
Monday, July 13, 2026

B.Y. Raghavendra ನಮ್ಮ ಸಹಕಾರಿ ಸಿಬ್ಬಂದಿ ಮತ್ತು ಆಡಳಿತ ಮಂಡಳಿ ಸದಸ್ಯರ ಆರೋಗ್ಯ ರಕ್ಷಣೆ ಅತ್ಯಂತ ಪ್ರಮುಖ : ಬಿ.ವೈ.ರಾಘವೇಂದ್ರ

Date:

B.Y. Raghavendra ಅಂತರರಾಷ್ಟ್ರೀಯ ಸಹಕಾರಿ ದಿನ–2026 ಹಾಗೂ ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯ ಐದನೇ ವರ್ಷದ ಅಂಗವಾಗಿ, ಶಿಕಾರಿಪುರದ ಶಾಂತಿನಗರದ ಬನಸಿರಿ ಸಭಾಂಗಣದಲ್ಲಿ ತಾಲೂಕಿನ ವಿವಿಧ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಗಾಗಿ “ಒಂದು ದಿನದ ವಿಶೇಷ ಆರೋಗ್ಯ ತಪಾಸಣೆ ಶಿಬಿರ ಮತ್ತು ಆರೋಗ್ಯ ಮಾಹಿತಿ ಕಾರ್ಯಾಗಾರ”ವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಶಿಬಿರವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಬಸವೇಶ್ವರ ಸಹಕಾರಿ ಒಕ್ಕೂಟ ಶಿಕಾರಿಪುರ, ತಾಲ್ಲೂಕು ಸಹಕಾರ ಭಾರತಿ ಶಿಕಾರಿಪುರ, ಸಹಕಾರ ಇಲಾಖೆ ಶಿವಮೊಗ್ಗ, ಉಪವಿಭಾಗ ಸಾಗರ ಹಾಗೂ ಶಿಕಾರಿಪುರ ತಾಲೂಕಿನ ವಿವಿಧ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಗ್ರಾಮೀಣ ಆರ್ಥಿಕತೆ ಹಾಗೂ ರೈತರ ಬೆನ್ನೆಲುಬಾಗಿ ಹಗಲಿರುಳು ಶ್ರಮಿಸುತ್ತಿರುವ ಸಹಕಾರ ಕ್ಷೇತ್ರದ ಸಿಬ್ಬಂದಿ ಮತ್ತು ಆಡಳಿತ ಮಂಡಳಿ ಸದಸ್ಯರ ಆರೋಗ್ಯ ರಕ್ಷಣೆ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ಇಂತಹ ಆರೋಗ್ಯ ತಪಾಸಣೆ ಶಿಬಿರಗಳ ಮೂಲಕ ಉಚಿತ ಆರೋಗ್ಯ ಪರೀಕ್ಷೆ ಹಾಗೂ ಆರೋಗ್ಯ ಸಂಬಂಧಿತ ಅಗತ್ಯ ಮಾಹಿತಿ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಹಕಾರ ಕ್ಷೇತ್ರದ ಬಲವರ್ಧನೆಗೆ ಶ್ರಮಿಸುತ್ತಿರುವ ಸಿಬ್ಬಂದಿ ವರ್ಗದವರು ಉತ್ತಮ ಆರೋಗ್ಯ ಮತ್ತು ಸುಖಮಯ ಜೀವನ ನಡೆಸಲಿ ಎಂದು ಶುಭ ಹಾರೈಸಿದ ಸಂಸದರು, ಇಂತಹ ಕಲ್ಯಾಣ ಕಾರ್ಯಕ್ರಮಗಳು ಮುಂದೆಯೂ ನಿರಂತರವಾಗಿ ನಡೆಯಬೇಕು ಎಂದು ಆಶಿಸಿದರು.

B.Y. Raghavendra ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದ ವಿವಿಧ ಸಂಘಗಳ ಪದಾಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಹಾಗೂ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...