ಶಿವಮೊಗ್ಗ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಡಿ.ವಿ.ಎಸ್. ಸರ್ಕಲ್ ಬಳಿ ಗಾಂಧಿ ಪಾರ್ಕ್ ಹತ್ತಿರ ಜೂ. 12 ರಂದು ಅಸ್ವಸ್ಥನಾಗಿ ಬಿದ್ದಿದ್ದ ಸುಮಾರು 40 ರಿಂದ 45 ವರ್ಷದ ರಮೇಶ್ ಬಿನ್ ಶಿವಾನಂದಪ್ಪ ಎಂಬ ವ್ಯಕ್ತಿಯನ್ನು ಸಾರ್ವಜನಿಕರು ಆಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿ, ಜೂ. 23 ರಂದು ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿರುತ್ತಾನೆ.
ಮೃತನ ಬಳಿ ವಿಳಾಸ, ವಾರಸುದಾರರ ಬಗ್ಗೆ ಯಾವುದೇ ಸುಳಿವು ಇರುವುದಿಲ್ಲ.
ಮೃತ ವ್ಯಕ್ತಿಯು 5.6 ಅಡಿ ಎತ್ತರ, ದುಂಡು ಮುಖ, ದೃಢವಾದ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ತೆಳು ಗುಲಾಬಿ ಬಣ್ಣದ ತುಂಬು ತೋಳಿನ ಶರ್ಟ್ ಹಾಗೂ ಕಂದು ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾನೆ.
ಈ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಸುಳಿವು ಇದ್ದಲ್ಲಿ ಕೋಟೆ ಪೊಲೀಸ್ ಠಾಣೆ ದೂ.ಸಂ.: 08182-261415 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ತಿಳಿಸಿದೆ.
ವಾರಸುದಾರರಿಲ್ಲದ ಮೃತವ್ಯಕ್ತಿಯ ಬಗ್ಗೆ ಪೊಲೀಸ್ ಪ್ರಕಟಣೆ
Date:
