Sunday, August 23, 2026
Sunday, August 23, 2026

Inner Wheel Club Shivamogga ಕೊಳಗೇರಿ ಮಕ್ಕಳ ಶಿಕ್ಷಣ, ಪರಿಸರ ರಕ್ಷಣೆ, ಸಸಿ ನೆಡುವಿಕೆ ಇತ್ಯಾದಿ ಜನಜಾಗೃತಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ- ಸುರೇಖಾ ಮುರಳೀಧರ್

Date:

Inner Wheel Club Shivamogga ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಈಸ್ಟ್‌ನ 2026–27ನೇ ಸಾಲಿನ ಪದಗ್ರಹಣ ಸಮಾರಂಭವು ರೋಟರಿ ಶಾಲೆಯ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶ್ರೀಮತಿ ಸುರೇಖಾ ಮುರಳೀಧರ್ ಹಾಗೂ ಗೌರವ ಅತಿಥಿಯಾಗಿ ಶ್ರೀಮತಿ ಶಬರಿ ಕಡಿದಾಳ್ ಭಾಗವಹಿಸಿ ನೂತನ ಅಧ್ಯಕ್ಷೆ ಹಾಗೂ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಸಭಾಂಗಣವು ಇನ್ನರ್ ವೀಲ್ ಸದಸ್ಯೆಯರು, ಮಾಜಿ ಜಿಲ್ಲಾ ಅಧ್ಯಕ್ಷೆಯರು, ರೋಟೇರಿಯನ್ನರು, ಹಿತೈಷಿಗಳು ಹಾಗೂ ಗಣ್ಯ ಅತಿಥಿಗಳಿಂದ ಕಿಕ್ಕಿರಿದು ತುಂಬಿತ್ತು.
ಇನ್ನರ್ ವೀಲ್ ವರ್ಷದ ಮೊದಲ ದಿನವೇ ಪದಗ್ರಹಣ ಸಮಾರಂಭದೊಂದಿಗೆ ಎರಡು ಮಹತ್ವದ ಮೆಗಾ ಸೇವಾ ಯೋಜನೆಗಳನ್ನು ಅನುಷ್ಠಾನಗೊಳಿಸಲಾಯಿತು. ಕಾರ್ಯಕಾರಿ ಸಮಿತಿಯ ವತಿಯಿಂದ ರೋಟರಿ ಶಾಲೆಗೆ ಪ್ರೊಜೆಕ್ಟರ್‌ನ್ನು ಕೊಡುಗೆಯಾಗಿ ನೀಡಲಾಯಿತು. ಸದಸ್ಯೆಯರ ಸಹಕಾರದಿಂದ 10 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಕ್ಲಬ್‌ಗೆ ಏಳು ನೂತನ ಸದಸ್ಯೆಯರನ್ನು ಆತ್ಮೀಯವಾಗಿ ಸೇರ್ಪಡೆಗೊಳಿಸಲಾಯಿತು.
ವೈದ್ಯರ ದಿನದ ಅಂಗವಾಗಿ ಕ್ಲಬ್‌ನ ವೈದ್ಯ ಸದಸ್ಯೆಯರನ್ನು ಗೌರವಿಸಲಾಯಿತು. ನೂತನ ಸದಸ್ಯೆ ಡಾ. ಸೋನಿಯಾ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಇತರ ವೈದ್ಯರಿಗೂ ಗೌರವ ಸಲ್ಲಿಸಲಾಯಿತು.
ಅದೇ ದಿನ ಬೆಳಿಗ್ಗೆ ಸನ್ ಸ್ಪೈನ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಮೆಡಿಕಲ್ ಇಕ್ವಿಪ್‌ಮೆಂಟ್ ಬ್ಯಾಂಕ್‌ಗೆ ವೈದ್ಯಕೀಯ ಉಪಕರಣಗಳನ್ನು ದಾನ ಮಾಡುವ ಮೂಲಕ ಸೇವಾ ಚಟುವಟಿಕೆಗಳಿಗೆ ಅರ್ಥಪೂರ್ಣ ಚಾಲನೆ ನೀಡಲಾಯಿತು.
ಗೌರವ ಅತಿಥಿ ಶ್ರೀಮತಿ ಶಬರಿ ಕಡಿದಾಳ್ ಅವರು ಸದಸ್ಯೆಯರನ್ನು ಸೇವಾ ಮನೋಭಾವದಿಂದ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿದರು.
Inner Wheel Club Shivamogga ಮುಖ್ಯ ಅತಿಥಿ ಶ್ರೀಮತಿ ಸುರೇಖಾ ಮುರಳೀಧರ್ ಅವರು ಕಳೆದ ಸಾಲಿನ ಅಧ್ಯಕ್ಷೆ ಶ್ರೀಮತಿ ವೀಣಾ ಸುರೇಶ್ ಹಾಗೂ ಅವರ ತಂಡದ ಸೇವಾ ಕಾರ್ಯಗಳನ್ನು ಶ್ಲಾಘಿಸಿ, ಮುಂದಿನ ದಿನಗಳಲ್ಲಿ ಕೊಳಗೇರಿ ಪ್ರದೇಶದ ಮಕ್ಕಳ ಶಿಕ್ಷಣ, ಸಮಾಜದ ಹಿಂದುಳಿದ ವರ್ಗಗಳ ಅಭಿವೃದ್ಧಿ, ಪರಿಸರ ಸಂರಕ್ಷಣೆ, ಸಸಿ ನೆಡುವಿಕೆ, ಕಾರ್ಮಿಕರ ಸಬಲೀಕರಣ ಹಾಗೂ ಸರ್ಕಾರಿ ಜನೋಪಯೋಗಿ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸುವಂತಹ ಸಮಾಜಮುಖಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡುವಂತೆ ಕರೆ ನೀಡಿದರು. ಭ್ರಷ್ಟಾಚಾರ ರಹಿತ ಸೇವೆಯ ಮಹತ್ವವನ್ನೂ ಅವರು ಒತ್ತಿ ಹೇಳಿದರು.
ಈ ಸಂದರ್ಭದಲ್ಲಿ ಅವರು Special Intensive Revision (SIR) ಕುರಿತು ಮಾಹಿತಿ ನೀಡಿ, ಪ್ರತಿಯೊಬ್ಬರೂ ಮತದಾರರ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಯುವಜನತೆಯೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕೆಂದು ತಿಳಿಸಿದರು.
ಸೇವೆ, ಸ್ನೇಹ, ಗೌರವ ಹಾಗೂ ಹೊಸ ಸಂಕಲ್ಪಗಳೊಂದಿಗೆ ನಡೆದ ಈ ಪದಗ್ರಹಣ ಸಮಾರಂಭವು ಅತ್ಯಂತ ಯಶಸ್ವಿಯಾಗಿ ನೆರವೇರಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...