Sunday, August 23, 2026
Sunday, August 23, 2026

ಶಿವಮೊಗ್ಗದಂತಹ ಮಲೆನಾಡಿನ ಸೌಂದರ್ಯವನ್ನ ಆಸ್ವಾದಿಸುವುದೇ ಆನಂದ- ಮೊಹ್ಮದ್ ಹ್ಯಾರಿಸ್ ನಲಪಾಡ್

Date:

ಆರೋಗ್ಯ, ಪರಿಸರ ರಕ್ಷಣೆ, ಕ್ರೀಡಾ ಸಂಸ್ಕೃತಿ ಹಾಗೂ ವಿಶೇಷ ಚೇತನರ ಸಬಲೀಕರಣದ ಸಂದೇಶ ಸಾರುವ ಉದ್ದೇಶದೊಂದಿಗೆ ಯುವ ನಾಯಕ ಡಾ. ಶರತ್‌ ಮರಿಯಪ್ಪ ನೇತೃತ್ವದ “ಡಾ. ಶರತ್ ಮರಿಯಪ್ಪ ಫೌಂಡೇಷನ್’ ವತಿಯಿಂದ ಇಂದು( ಜು.5) ನಗರದಲ್ಲಿ ಆಯೋಜಿಸಿದ್ದ ‘ರನ್ ಮಲೆನಾಡು’ ಮ್ಯಾರಥಾನ್ ಅಭೂತ ಪೂರ್ವ ಯಶಸ್ಸು ಕಂಡಿತು.

ಜಿಟಿ ಜಿಟಿ ಮಳೆಯಲ್ಲೂ ರನ್ ಮಲೆನಾಡು ಓಟಕ್ಕೆ ಭಾರೀ ಸಂಖ್ಯೆಯ ಜನರು ಭಾಗವಹಿಸಿದ್ದರು. ವಿಶೇಷವಾಗಿ ಮಕ್ಕಳು, ವಿಶೇಷ ಚೇತನರು, ಹಿರಿಯರು, ದಂಪತಿಗಳು ಕೂಡ ಸುರಿಯುವ ಮಳೆಯನ್ನು ಲೆಕ್ಕಿಸದೆ “ರನ್ ಮಲೆನಾಡು” ಸ್ಪರ್ಧೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

ಸರಿ ಸುಮಾರು 4 ಸಾವಿರಕ್ಕೂ ಹೆಚ್ಚು ಜನರು ರನ್ ಮಲೆನಾಡು ಮ್ಯಾರಥಾನ್ ಮೂಲಕ ಮಲೆನಾಡಿನ ಜನರ ಆರೋಗ್ಯ, ಪರಿಸರ ಸಂರಕ್ಷಣೆಗಾಗಿ ನಗರದ ರಸ್ತೆಗಳಲ್ಲಿ ಓಡಿದರು. ನಗರದಲ್ಲಿ ನಡೆದ ಮ್ಯಾರಥಾನ್ ಓಟಕ್ಕೆ ಇದೇ ಮೊದಲ ಬಾರಿಗೆ ಅಧಿಕ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು ಕಂಡು ಬಂತು. ಈ ಮೂಲಕ ಜಿಲ್ಲೆಯ ಮ್ಯಾರಥಾನ್ ಇತಿಹಾಸದಲ್ಲಿ ‘ರನ್‌ ಮಲೆನಾಡು’ ಓಟವು ದಾಖಲೆ ಸೃಷ್ಟಿಸಿತು.

ನಗರದ ನೆಹರು ಕ್ರೀಡಾಂಗಣದ ಮುಂಭಾಗದಿಂದ ಬೆಳಗ್ಗೆ ಆರಂಭಗೊಂಡ ‘ರನ್ ಮಲೆನಾಡು’ ಮ್ಯಾರಥಾನ್ ಓಟಕ್ಕೆ ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ಹ್ಯಾರೀಸ್ ನಲಪಾಡ್ ಅವರು ಸಾಂಕೇತಿಕ ಗಿಡಕ್ಕೆ ನೀರೆರೆದು ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಆ ಬಳಿಕ ಮಾತನಾಡಿದ ಅವರು, “ಬೆಂಗಳೂರು ಜನರಿಗೆ ಬೆಂಗಳೂರಿನಷ್ಟು ಒಳ್ಳೆಯ ವಾತಾವರಣ ಇನ್ನೆಲ್ಲೂ ಇಲ್ಲ ಎನ್ನುವ ಜಂಭವಿದೆ, ಆದರೆ ನಾನು ಶಿವಮೊಗ್ಗಕ್ಕೆ ಬಂದಾಗ ಇಲ್ಲಿನ ಸುಂದರವಾದ ವಾತಾವರಣದ ಅನುಭವದೊಂದಿಗೆ ಬೆಂಗಳೂರನ್ನೇ ಮರೆತು ಬಿಟ್ಟಿದ್ದೇನೆ. ಇಂತಹ ಮಲೆನಾಡಿನ ಈ ಸೌಂದರ್ಯವನ್ನು ಆಸ್ವಾದಿಸುವುದೇ ಆನಂದ’ ಎನ್ನುತ್ತಾ ಜಿಟಿ ಜಿಟಿ ಮಳೆಯ ತಣ್ಣನೆಯ ವಾತಾವರಣವನ್ನು ಮುಕ್ತ ಕಂಠದಿಂದ ಬಣ್ಣಿಸಿದರು.

ಫೌಂಡೇಷನ್ ಸಂಸ್ಥಾಪಕ ಡಾ.ಶರತ್‌ ಮರಿಯಪ್ಪ, ಮಾತನಾಡಿ, ಒಂದೊಳ್ಳೆಯ ಉದ್ದೇಶಕ್ಕಾಗಿ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಬೇಕೆಂದು ಯೋಚಿಸಿದ್ದೇವು. ಅದನ್ನು ಫೌಂಡೇಶನ್ ಮೂಲಕ ನಡೆಸೋಣ ಅಂತ ನಿರ್ಧಾರ ಮಾಡಿದೆವು. ಆಗ ಹೊಳೆದಿದ್ದು” ರನ್ ಮಲೆನಾಡು’ ಮ್ಯಾರಥಾನ್. ಈ ಓಟಕ್ಕೆ ಇವತ್ತು ಇಷ್ಟು ಜನರು ಬಂದು ಬೆಂಬಲಿಸಿದ್ದು ಈ ಮರೆಯಲಾಗದ ಐತಿಹಾಸಿಕ ದಿನ”. ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್ ಪ್ರಸನ್ ಕುಮಾರ್,ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡರವರು, ಡಿ ಸಿ ಸಿ ಬ್ಯಾಂಕ್ ಉಪಾಧ್ಯಕ್ಷರಾದ ಎಸ್ ಕೆ ಮರಿಯಪ್ಪನವರು,ರಾಜ್ಯ ಕಾಂಗ್ರೆಸ್ ನಾಯಕರು ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ. ಶ್ರೀಕಾಂತ್ ರವರು, ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾದ ಕೆ ರಂಗನಾಥ್ ರವರು, ಹಾಪ್ ಕಾಮ್ಸ್ ಅಧ್ಯಕ್ಷರಾದ ವಿಜಯ್ ಕುಮಾರ್ ದನಿ, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಎಚ್. ಪಾಲಾಕ್ಷಿ, ರೇಖಾ ರಂಗನಾಥ್, ಸೂಡಾ ಸದಸ್ಯರಾದ ಎಂ ಪ್ರವೀಣ್ ಕುಮಾರ್, ರಾಜ್ಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಹಾಗೂ ವೃಕ್ಷ ಫೌಂಡೇಶನ್ ನ ಅಧ್ಯಕ್ಷರಾದ ಎಂ ಸೋನಿಯಾ ,ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹೆಚ್ ಪಿ ಗಿರೀಶ್, ಸಿಟಿ ಬ್ಯಾಂಕ್ ನಿರ್ದೇಶಕ ಬಿ .ಲೋಕೇಶ್, ಯುವ ಮುಖಂಡ ವಿನಯ್ ತಾಂಡ್ಲೆ ಸ್ಟೆಪ್ ಹೋಲ್ಡರ್ಸ್ ಡ್ಯಾನ್ಸ್ ಟೀಮ್ ನ ಅರುಣ್ ರಾಜ್ ಹಾಗೂ ಶಿವಮೊಗ್ಗ ನಗರದ ವಿವಿಧ ಸಂಘ ಸಂಸ್ಥೆಯ ಪ್ರಮುಖರು, ಕಾಂಗ್ರೆಸ್ ಪಕ್ಷದ ಮುಖಂಡರುಗಳು, ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...