Tuesday, July 7, 2026
Tuesday, July 7, 2026

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

Date:

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಮನೆ ಕುಸಿದಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯ ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಶಾಸಕ ಎಸ್.ಎನ್‌ಚನ್ನಬಸಪ್ಪ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮನೆ ಕಳೆದುಕೊಂಡು ಸಂಕಷ್ಟದಲ್ಲಿರುವ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಹಾಗೂ ಸಾರ್ವಜನಿಕರಿಗೆ ಆಗಿರುವ ತೊಂದರೆಗಳ ಕುರಿತು ಸ್ಥಳೀಯ ನಿವಾಸಿಗಳಿಂದ ಮುಕ್ತವಾಗಿ ಮಾಹಿತಿ ಪಡೆದರು.

ಮಳೆಯಿಂದ ನೊಂದ ಕುಟುಂಬಕ್ಕೆ ತಕ್ಷಣದ ತುರ್ತು ಪರಿಹಾರ ವಿತರಿಸಲು ಮತ್ತು ಸರ್ಕಾರದ ನಿಯಮಾವಳಿಗಳ ಅನ್ವಯ ಗರಿಷ್ಠ ಪ್ರಮಾಣದ ಪರಿಹಾರ ಧನವನ್ನು ತ್ವರಿತವಾಗಿ ಮಂಜೂರು ಮಾಡಲು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸ್ಥಳದಲ್ಲೇ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

S.N. Channabasappa ಭೇಟಿಯ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಜಗನ್ನಾಥ್, SC ಮೋರ್ಚಾ ನಗರ ಅಧ್ಯಕ್ಷರಾದ ಶ್ರೀ ವಿಜಯೇಂದ್ರ, ಕಾರ್ಯದರ್ಶಿಗಳಾದ ಶ್ರೀ ರಾಘವೇಂದ್ರ, ಮಹಾನಗರ ಪಾಲಿಕೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...