Monday, July 13, 2026
Monday, July 13, 2026

ಇಸ್ಪೀಟು- ಬಡ್ಡಿ ಮಾಫಿಯಾಗೆ ಬೇಸತ್ತ ಯುವಕ ಆತ್ಮಹತ್ಯೆಗೆ ಯತ್ನ

Date:

ಭದ್ರಾವತಿ ನಗರದ ಭೋವಿ ಕಾಲೊನಿಯ ನಿವಾಸಿ ಅಶೋಕ ಆತ್ಮಹತ್ಯೆಗೆ ಯತ್ನಿಸಿದ್ದು, ಅದಕ್ಕೂ ಮುನ್ನ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೊದಲ್ಲಿ ಪಾಪಣ್ಣ, ಕುಳ್ಳಿ ರಾಜೇಶ್, ಅಣ್ಣಪ್ಪ ಹಾಗೂ ಧೃವ ಎಂಬವರ ಹೆಸರನ್ನು ಉಲ್ಲೇಖಿಸಿರುವ ಅಶೋಕ, ಇಸ್ಪೀಟು ಆಡಲು ದುಬಾರಿ ಬಡ್ಡಿಗೆ ಹಣ ನೀಡಿಸಿ, ಬಳಿಕ ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಾಲ ಹಾಗೂ ಬಡ್ಡಿ ಹಣವನ್ನು ಕೂಡಲೇ ವಾಪಸ್ ನೀಡುವಂತೆ ಒತ್ತಡ ಹೇರಿ, ಹಣ ಕೊಡದಿದ್ದರೆ ಮನೆಗೆ ಬಂದು ಹಲ್ಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ವಿಡಿಯೊದಲ್ಲಿ ತಿಳಿಸಿದ್ದಾರೆ.

ಪಾಪಣ್ಣ ಅವರು ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗೇಶ್ವರ್ ಅವರ ಸಹೋದರ ಎಂದು ಕೂಡ ಅಶೋಕ ಉಲ್ಲೇಖಿಸಿದ್ದಾರೆ.

ಇದೇ ವೇಳೆ, “ನನಗೂ ಕೆಲವರಿಂದ ಹಣ ಬರಬೇಕಿದೆ. ಡೊಳ್ಳ ಸೂರಿ ಸೇರಿದಂತೆ ಹಲವರು ಹಣ ವಾಪಸ್ ನೀಡಿಲ್ಲ. ಆದರೆ ಆ ಹಣ ಸಿಗದಿದ್ದರೂ ನನ್ನನ್ನೇ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗುತ್ತಿದೆ. ಈ ನಿರಂತರ ಕಿರುಕುಳ ಮತ್ತು ಅವಮಾನದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸುತ್ತಿದ್ದೇನೆ. ನನ್ನ ಸಾವಿಗೆ ಇವರೇ ಕಾರಣ” ಎಂದು ಅಶೋಕ ವಿಡಿಯೊದಲ್ಲಿ ಆರೋಪಿಸಿದ್ದಾರೆ.

ಈ ಘಟನೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...