Sunday, August 23, 2026
Sunday, August 23, 2026

ಇಸ್ಪೀಟು- ಬಡ್ಡಿ ಮಾಫಿಯಾಗೆ ಬೇಸತ್ತ ಯುವಕ ಆತ್ಮಹತ್ಯೆಗೆ ಯತ್ನ

Date:

ಭದ್ರಾವತಿ ನಗರದ ಭೋವಿ ಕಾಲೊನಿಯ ನಿವಾಸಿ ಅಶೋಕ ಆತ್ಮಹತ್ಯೆಗೆ ಯತ್ನಿಸಿದ್ದು, ಅದಕ್ಕೂ ಮುನ್ನ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೊದಲ್ಲಿ ಪಾಪಣ್ಣ, ಕುಳ್ಳಿ ರಾಜೇಶ್, ಅಣ್ಣಪ್ಪ ಹಾಗೂ ಧೃವ ಎಂಬವರ ಹೆಸರನ್ನು ಉಲ್ಲೇಖಿಸಿರುವ ಅಶೋಕ, ಇಸ್ಪೀಟು ಆಡಲು ದುಬಾರಿ ಬಡ್ಡಿಗೆ ಹಣ ನೀಡಿಸಿ, ಬಳಿಕ ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಾಲ ಹಾಗೂ ಬಡ್ಡಿ ಹಣವನ್ನು ಕೂಡಲೇ ವಾಪಸ್ ನೀಡುವಂತೆ ಒತ್ತಡ ಹೇರಿ, ಹಣ ಕೊಡದಿದ್ದರೆ ಮನೆಗೆ ಬಂದು ಹಲ್ಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ವಿಡಿಯೊದಲ್ಲಿ ತಿಳಿಸಿದ್ದಾರೆ.

ಪಾಪಣ್ಣ ಅವರು ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗೇಶ್ವರ್ ಅವರ ಸಹೋದರ ಎಂದು ಕೂಡ ಅಶೋಕ ಉಲ್ಲೇಖಿಸಿದ್ದಾರೆ.

ಇದೇ ವೇಳೆ, “ನನಗೂ ಕೆಲವರಿಂದ ಹಣ ಬರಬೇಕಿದೆ. ಡೊಳ್ಳ ಸೂರಿ ಸೇರಿದಂತೆ ಹಲವರು ಹಣ ವಾಪಸ್ ನೀಡಿಲ್ಲ. ಆದರೆ ಆ ಹಣ ಸಿಗದಿದ್ದರೂ ನನ್ನನ್ನೇ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗುತ್ತಿದೆ. ಈ ನಿರಂತರ ಕಿರುಕುಳ ಮತ್ತು ಅವಮಾನದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸುತ್ತಿದ್ದೇನೆ. ನನ್ನ ಸಾವಿಗೆ ಇವರೇ ಕಾರಣ” ಎಂದು ಅಶೋಕ ವಿಡಿಯೊದಲ್ಲಿ ಆರೋಪಿಸಿದ್ದಾರೆ.

ಈ ಘಟನೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...