Sunday, August 23, 2026
Sunday, August 23, 2026

ಕಲಬುರ್ಗಿಯಲ್ಲಿ ಸೀಎಂ ಡಿ.ಕೆ.ಶಿವಕುಮಾರ್ ಅವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

Date:

ಕಲಬುರಗಿ‌ ವಿಭಾಗ ಮಟ್ಟದ ಬರ ಪರಿಸ್ಥಿತಿ ಅವಲೊಕಿಸಲು ಜಿಲ್ಲೆಗೆ ಅಗಮಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸಾರ್ವಜನಿಕರು, ಸಂಘ ಸಂಸ್ಥೆಗಳ ನೂರಾರು ಪ್ರತಿನಿಧಿಗಳಿಂದ ಅಹವಾಲು ಆಲಿಸಿದರು.

ಜುಲೈ ತಿಂಗಳಲ್ಲಿಯೂ ಮಳೆ ಬರುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಕಲಬುರಗಿ ಜಿಲ್ಲೆಯನ್ನು ಬರಗಾಲ ಪಿಡಿತ ಪ್ರದೇಶವೆಂದು ಘೋಷಿಸಬೇಕು. ಕಳೆದ ವರ್ಷದ ಬಾಕಿ ಬೆಳೆ ವಿಮಿ ಮೊತ್ತ 300 ಕೋಟಿ ರೂ. ಕೂಡಲೆ ಬಿಡುಗಡೆ ಮಾಡಬೇಕೆಂದು ನವ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ದಯಾನಂದ ಸಿ.ಪಾಟೀಲ ಮನವಿ ಮಾಡಿದರು.

ಎಸ್.ಟಿ ಸಮುದಾಯಕ್ಕೆ ಸೇರಿದ ತಳವಾರ, ನಾಯ್ಕಡ್ ವರ್ಗದ ವಿದ್ಯಾರ್ಥಿಗಳಿಗೆ ಕಳೆದ ಎರಡು ವರ್ಷಗಳಿಂದ ಜಾತಿ ಪ್ರಮಾಣ ಪತ್ರ‌ ನಿಡುತ್ತಿಲ್ಲ, ಇದರಿಂದ ಸಮಾಜದ ಯುವಕರಿಗೆ ಉದ್ಯೋಗ, ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. ಕೂಡಲೆ ಸಮಸ್ಯೆ ಬಗೆಹರಿಸಬೇಕೆಂದರು.

ಬೆಳೆ ಸಾಲ ಮನ್ನಾ ಮಾಡಿ:

ಕಳೆದ ವರ್ಷ ಅತಿವೃಷ್ಟಿಯಿಮದ ಹಸಿ ಬರಗಾಲ ಬಂದರೆ, ಈ ವರ್ಷ ಮಳೆ ಬಾರದೆ ಒಣ ಬರಗಾಲ ನೋಡುವ ಸ್ಥಿತಿ ನಮ್ಮ ರೈತಾಪಿ ವರ್ಗಕ್ಕೆ ಬಂದಿದೆ. ಕಲಬುರಗಿ ಜಿಲ್ಲೆಯಲ್ಲಿ ಅಲ್ಲಲ್ಲಿ ಅಲ್ಪಸ್ವಲ್ಪ ಮಳೆ ಬಿದ್ದ ಕಾರಣ ಇದೂವರೆಗೆ ಶೇ.30ರಷ್ಡು ಮಾತ್ರ ಬಿತ್ತನೆ ಮಾಡಲಾಗಿದೆ. ಬಿತ್ತನೆ ನಂತರ ಮಖೆ ಬರದ ಕಾರಣ ರೈತ ಕಂಗಾಲಿದ್ದಾನೆ. ಸಾಲ ಸೂಲ ಮಾಡಿ ಬೀಜ. ಗೊಬ್ಬರ ಖರೀದಿ ಮಾಡಿದ್ದು, ಬೆಳೆ ಕೈಕೊಡುವ ಎಲ್ಲಾ ಲಕ್ಷ್ಣ ಗೋಚರಿಸುತ್ತಿದೆ. ಹೀಗಾಗಿ ಸಹಕಾರಿ ಬ್ಯಾಂಕ್ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ಸಾಲ ಪಡೆದ ರೈತರಿಗೆ ಸಾಲ ಮನ್ನಾ ಮಾಡಬೇಕೆಂದು ಸಿ‌.ಎಂ. ಅವರಿಗೆ ಮನವಿ ಪತ್ರ ಸಲ್ಲಿಸಿ ಜಿಲ್ಲಾ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ‌ ಸಿದ್ರಾಮಪ್ಪ ಪಾಟೀಲ ಧಂಗಾಪೂರ ಆಗ್ರಹಿಸಿದರು.

ರಾಜ್ಯದ ಉಪಮುಖ್ಯಮಂತ್ರಿ, ಕಂದಾಯ ಮತ್ತು ಯುವಜನ ಸಬಲೀಕರಣ‌ ಮತ್ತು ಕ್ರೀಡಾ ಸಚಿವ ಡಾ.ಜಿ.ರಮೇಶ್ವರ, ಗೃಹ, ಐ.ಟಿ-ಬಿ.ಟಿ ಹಾಗೂ ಇ-ಆಡಳಿತ ಎಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ,‌ ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕ‌ ರಾದ ಎಂ.ವೈ.ಪಾಟೀಲ, ಜಗದೇವ ಗುತ್ತೇದಾರ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...