ಆಯನೂರು ಸಮೀಪದ ಚಿನ್ನಮನೆ ಬಸ್ ನಿಲ್ದಾಣದ ಸಮೀಪ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಎರಡು ಬೈಕ್ಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಮತ್ತೋರ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಲಾರಿ ಚಾಲಕನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ಗಳಿಗೆ ಡಿಕ್ಕಿ ಹೊಡೆದು ನಿಲ್ಲಿಸದೆ ವೇಗವಾಗಿ ಪರಾರಿಯಾಗಲು ಯತ್ನಿಸಿದ್ದಾನೆ ಇದನ್ನು ಗಮನಿಸಿದ ಸ್ಥಳೀಯರು ಹಾಗೂ ಸಾರ್ವಜನಿಕರು ಲಾರಿಯನ್ನು ಬೆನ್ನಟ್ಟಿ ಅರಸಾಳು ರೈಲ್ವೆ ನಿಲ್ದಾಣದವರೆಗೆ ತೆರಳಿ ಅಡ್ಡಗಟ್ಟಿದರು. ಆದರೆ ಈ ವೇಳೆ ಲಾರಿ ಚಾಲಕ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ. ಅಪಘಾತದಲ್ಲಿ ಚಿನ್ನಮನೆಯ ರಾಘು ಎಂಬುವವರಿಗೆ ಅವರಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಇನ್ನೊಂದು ಬೈಕ್ ನಲ್ಲಿದ್ದ ಹಾಲೇಶಪ್ಪ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯಲ್ಲಿ ಎರಡು ಬೈಕ್ ನಜ್ಜುಗುಜ್ಜಾಗಿವೆ. ಗಾಯಾಳು ರಾಘು ಎಂಬುವವರನ್ನು ಮೊದಲಿಗೆ ಆಯನೂರಿನ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಿಪ್ಪನ್ಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿ ಲಾರಿಯನ್ನು ವಶಕ್ಕೆ ಪಡೆದು, ಘಟನೆ ನಡೆದಿರುವ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಗೆ ವಾಹನವನ್ನು ಕಳುಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕುಂಸಿ ಪೊಲೀಸರು ಲಾರಿ ಚಾಲಕನ ಪತ್ತೆಗೆ ಕ್ರಮ ಕೈಗೊಂಡಿದ್ದು, ಅಪಘಾತಕ್ಕೆ ನಿಖರ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.
ಆಯನೂರು ಚಿನ್ಮನೆ ಸನಿಹ ” ಹಿಟ್ ಅಂಡ್ ರನ್” ಪ್ರಕರಣ ದಾಖಲು
Date:
