Sunday, August 23, 2026
Sunday, August 23, 2026

Friends Center Organization ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಫ್ರೆಂಡ್ಸ್ ಸೆಂಟರ್ ಸಂಸ್ಥೆ ಪ್ರಸಿದ್ಧಿ ಪಡೆದಿದೆ- ಎಸ್.ಎನ್.ಚನ್ನಬಸಪ್ಪ

Date:

Friends Center Organization ಸಮಾಜಮುಖಿ, ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹಲವಾರು ಕಾರ್ಯಕ್ರಗಳನ್ನು ಮಾಡಿರುವ ಈ ಫ್ರೆಂಡ್ಸ್ ಸೆಂಟರ್ ಸಂಸ್ಥೆ 60 ನೇ ವರ್ಷಕ್ಕೆ ಕಲಿಟ್ಟಿದ್ದು, ಶಿವಮೊಗ್ಗದಲ್ಲಿ ಅತೀ ಹೆಚ್ಚು ವರ್ಷಗಳನ್ನು ಮತ್ತು ಪೂರ್ವ ಅಧ್ಯಕ್ಷರನ್ನು ಒಳಗೊಂಡ ಸಂಸ್ಥೆಯಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ಹೇಳಿದರು.

ಗೋಪಾಳದ ಫ್ರೆಂಡ್ಸ್ ಸೆಂಟರ್ ಹಾಲ್ ನಲ್ಲಿ ನಡೆದ ಫ್ರೆಂಡ್ಸ್ ಸೆಂಟರ್ ಸಂಸ್ಥೆಯ 60 ನೇ ವಾರ್ಷಿಕೋತ್ಸವ ಸಮಾರಂಭ ಮತ್ತು ಪದಗ್ರಹಣ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದ ಅವರು, ಯುವಜನ ನಾಯಕತ್ವ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ, ರಾಜ್ಯ ಮಟ್ಟದ ಪ್ರಬಂಧ ಮತ್ತು ಚರ್ಚಾ ಸ್ಪರ್ಧೆಗಳು ಕಲೆ ಮತ್ತು ಸಂಸ್ಕೃತಿಗೆ, ರಕ್ತದಾನ ಮತ್ತು ನೇತ್ರಾದಾನ ಶಿಬಿರಗಳ ಜೊತೆಗೆ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತ ಬಂದಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಲ್ಲಿಕಾರ್ಜುನ ಕಾನೂರ್ ರವರು, ನಿತ್ಯ ಜೀವದ ಪ್ರಯಾಣದಲ್ಲಿ ಪ್ರತಿ ಕ್ಷಣವೂ ಹೊಸ ಪರಿಚಯ, ಸ್ನೇಹ, ಪರಿಚಿತರ ಬೀಳ್ಕೊಡಿಗೆಯೊಂದಿಗೆ ಸಾಗುತ್ತಿದೆ. ನಾವು ಇಲ್ಲದಿದ್ದರೂ ಜನರ ಮನಸಿನಲ್ಲಿ ಜೀವಿಸುವಂತಿರಬೇಕು, ಹೆಜ್ಜೆ ಗುರುತು ಉಳಿದರೆ ಅರ್ಥ ಬದ್ಧ ಜೀವನ ನಮ್ಮದಾದರೆ ಅದು ಒಂದು ಸಾರ್ಥಕ ಬದುಕಾಗುತ್ತದೆ. ಮನದಕಣ್ಣು ತೆರೆಯದೆ ನಾಗರೀಕತೆಯನ್ನು ದೋಷಸುವ ನಮ್ಮ ನಿಲುವು ಬದಲಾಗಬೇಕು. ಮಾನವೀಯ ಮೌಲ್ಯಗಳನ್ನು ಜೀವಂತವಾಗಿರಿಸುವಲ್ಲಿ ಈ ಸಂಸ್ಥೆಯ ಪಾತ್ರ ದೊಡ್ಡದಾಗಿದೆ.
ಮನುಷ್ಯ ವ್ಯಕ್ತಿತ್ವವನ್ನು ರೂಪಿಸುವ ಮತ್ತು ಸಮಾಜದಲ್ಲಿ ಶಾಂತಿ ಸೌಹಾರ್ದತೆ ಹಾಗೂ ಸಹಕಾರವನ್ನು ಬೆಳೆಸುವ ನ್ಯೆತಿಕ ಗುಣಗಳು ವ್ಯಕ್ತಿಯನ್ನು ಇತರರೊಂದಿಗೆ ಮಾನವೀಯತೆಯಿಂದ ಬದುಕಲು ಕಲಿಸುತ್ತದೆ. ಮತ್ತು ದ್ಯೆನಂದನ ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಂಡು ಅರೋಗ್ಯಕರ ಬದುಕನ್ನು ಸಾಧಿಸಬೇಕಾಗಿದೆ. ಜೀವನದಲ್ಲಿ ಯಾವುದೇ ಹಂತದಲ್ಲಿಯೂ ಹೊಸ ಆರಂಭ ಸಾಧ್ಯ ಎಂದ ಅವರು, ಕಾರ್ಯಕಾರಿ ಮಂಡಳಿಯ ಹೆಸರನ್ನು ಘೋಷಣೆ ಮಾಡಿದರು.

Friends Center Organization ಈ ಸಂದರ್ಭದಲ್ಲಿ ಅಶ್ವಥ್ ನಾರಾಯಣ್ ಮತ್ತು ರಾಜೇಶ್ ಪಿ. ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಂದ್ಯಾ ಸತ್ಯನಾರಾಯಣ ಪ್ರಾರ್ಥನೆ ಮಾಡಿದರು, ರವೀಂದ್ರನಾಥ್ ಐತಾಳ್ ವಾರ್ಷಿಕ ವರದಿ ಓದಿದರು, ರಮೇಶ್ ಬಾಬು ಎಸ್.ಜಿ. ಸ್ವಾಗತಿಸಿದರು, ಮೋಹನ್ ಕುಮಾರ್ ಎಲ್.ಎಂ. ವಂದಿಸಿದರು, ಜಿ.ವಿಜಯಕುಮಾರ್ ನಿರೂಪಿಸಿದರು.

ಈ ವೇಳೆ ಪೂರ್ವಧ್ಯಕ್ಷರಾದ ನಾಗರಾಜ್ ವಿ. ಸಂಸ್ಥೆಯ ಪ್ರಗತಿ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಕಾನೂರ್, ನಿಕಟ ಪೂರ್ವ ಅಧ್ಯಕ್ಷರಾದ ಧನರಾಜ್ ಬಿ.ಜೆ., ಸ್ವಪ್ನ ಬದರಿನಾಥ್, ಸುನೀತಾ ಚೇತನ್, ಸ್ಮಿತಾ ನವೀನ್, ಅನಿತ ಸುರೇಂದ್ರ ಕಾಸಲ, ಉಮಾ ವೆಂಕಟೇಶ್, ಲೋಕೇಶ್ ಹೆಚ್.ಕೆ., ಪಂಚಾಕ್ಷರಯ್ಯ ಹಿರೇಮಠ್, ಸತ್ಯನಾರಾಯಣ ಜಿ., ವೆಂಕಟೇಶ್ ಮೂರ್ತಿ ಟಿ.ಆರ್., ಮಹೇಶ್ವರಪ್ಪ ಹೆಚ್., ಮೋಹನ್ ಡಿ.ಪಿ. ಸೇರಿಂದತೆ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...