Tuesday, August 25, 2026
Tuesday, August 25, 2026

ಸೊರಬದ ಎಚ್.ಮಲ್ಲಿಕಾರ್ಜುನ್ ನಿವಾಸದಲ್ಲಿ “ಮನೆಗೊಂದು ಗ್ರಂಥಾಲಯ” ಉದ್ಘಾಟನೆ

Date:

ಕನ್ನಡ ಪುಸ್ತಕ ಪ್ರಾಧಿಕಾರ, ಜಿಲ್ಲಾ ಜಾಗೃತ ಸಮಿತಿ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಪಟ್ಟಣದ ನಿಜಗುಣ ರೆಸಿಡೆನ್ಸಿಯಲ್ ಸಭಾಂಗಣದಲ್ಲಿ ಜು.12 ರಂದು ಸಂಜೆ 5 ಕ್ಕೆ ಎಚ್. ಮಲ್ಲಿಕಾರ್ಜುನ ಅವರ ನಿವಾಸದ ಮನೆಗೊಂದು ಗ್ರಂಥಾಲಯ ಅನುಷ್ಠಾನ, ಮುಂಗಾರು ಜಾನಪದ ಸಂಭ್ರಮ ನಡೆಯಲಿದ್ದು, ಕಾರ್ಯಕ್ರಮದ ಉದ್ಘಾಟಕರಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಆಗಮಿಸಲಿದ್ದಾರೆ.

ಶಿವಮೊಗ್ಗ ಆನಂದಪುರ ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಶಂಕರ್ ಶೇಟ್ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ನಿಜಗುಣ ಆಫ್‌ಸೆಟ್ ಪ್ರಿಂಟರ್ಸ್ ಮಾಲಿಕ ಎಚ್. ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸುವರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದ ಕೆ. ಗುಡ್ಡಪ್ಪ ಜೋಗಿ, ಶ್ರೀಧರ್ ಇಂಟರ್ನ್ಯಾಷನಲ್ ಶಾಲೆಯ ಅಧ್ಯಕ್ಷೆ ರೂಪಾ ಶ್ರೀನಾಥ್, ಪ್ರಮುಖರಾದ ಚಂದ್ರಶೇಖರ ನಿಜಗುಣ, ಹುಚ್ಚರಾಯಪ್ಪ, ಡಾ. ಉಮೇಶ್ ಭದ್ರಾಪುರ, ಸುನಿತಾ ವಿಜಯಪ್ರಸಾದ್ ಆನವಟ್ಟಿ, ಪ್ರಜ್ವಲ್ ಚಂದ್ರಗುತ್ತಿ, ಮಹೇಶ್ ಖಾರ್ವಿ ಸೇರಿದಂತೆ ಮತ್ತಿತರರು ಪಾಲ್ಗೊಳ್ಳುವರು.

ಕಾರ್ಯಕ್ರಮದಲ್ಲಿ ಆಕಾಶವಾಣಿ ಕಲಾವಿದ ಎಚ್. ಗುರುಮೂರ್ತಿ ಹಾಗೂ ಗಾಯಕ ಜೈಕುಮಾರ್ ಶಿಗ್ಗಾ ಅವರನ್ನು ಸನ್ಮಾನಿಸಲಾಗುವುದು. ಸಭಾಕಾರ್ಯಕ್ರಮದ ನಂತರ ಕಲಾವಿದರಿಂದ ಜಾನಪದ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...