S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂಬರ್ 18, 28, 31 ಹಾಗೂ 33ರ ವಿವಿಧ ಬಡಾವಣೆಗಳಲ್ಲಿ ರಸ್ತೆ ಡಾಂಬರೀಕರಣ, ಸುಸಜ್ಜಿತ ಒಳಚರಂಡಿ ನವೀಕರಣ ಹಾಗೂ ವಿವಿಧ ನಾಗರಿಕ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸ್ತ್ರೋಕ್ತವಾಗಿ ‘ಗುದ್ದಲಿ ಪೂಜೆ’ಯನ್ನ ಶಾಸಕ ಎಸ್.ಎನ್.ಚನ್ನಬಸಪ್ಪ ನೆರವೇರಿಸಿದರು
ಕ್ಷೇತ್ರದ ತಳಮಟ್ಟದ ಅಗತ್ಯಗಳನ್ನು ಅರಿತು, ನಿಗದಿತ ಕಾಲಮಿತಿಯೊಳಗೆ ಅತ್ಯುನ್ನತ ಗುಣಮಟ್ಟದೊಂದಿಗೆ ಈ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲು ನಾವು ಕಟಿಬದ್ಧರಾಗಿದ್ದೇವೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಈ ಸಂದರ್ಭದಲ್ಲಿ ಹೇಳಿದರು.
ಈ ಪ್ರಗತಿಪರ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ನಾಗರಾಜ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮಂಜುನಾಥ ನವಲೆ, ನಗರ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮಂಜುನಾಥ ನವಲೆ, ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಶ್ರೀ ರಾಹುಲ್ ಬಿದರೆ, ಮಹಾಶಕ್ತಿ ಕೇಂದ್ರ ಅಧ್ಯಕ್ಷರುಗಳಾದ ಶ್ರೀ ಶಿವಮೂರ್ತಿ, ಶ್ರೀ ಜಗನ್ನಾಥ ಸೇರಿದಂತೆ ಸೇರಿದಂತೆ ಪಕ್ಷದ ಪ್ರಮುಖರು, ಸ್ಥಳೀಯ ಮುಖಂಡರು, ಕಾರ್ಯಕರ್ತ ಬಂಧುಗಳು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
