U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಮೂಲಸೌಕರ್ಯ, ವೈದ್ಯಕೀಯ ಸೇವೆಗಳು ಹಾಗೂ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಆಸ್ಪತ್ರೆಯ ಪ್ರತಿಯೊಂದು ವಾರ್ಡ್ಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದ ಸಚಿವರು, ಆಸ್ಪತ್ರೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು. ವಿಶೇಷವಾಗಿ ಹೆರಿಗೆ ವಿಭಾಗಕ್ಕೆ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳು, ವೈದ್ಯಕೀಯ ಉಪಕರಣಗಳು ಹಾಗೂ ಸೇವೆಗಳ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.
U.T. Khader ಆಸ್ಪತ್ರೆಯಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
