Tuesday, July 14, 2026
Tuesday, July 14, 2026

ಸರ್ಕಾರಿ ಯೋಜನೆಗಳು ಬಡವರಿಗೆ ,ಅರ್ಹ ಫಲಾನುಭವಿಗಳಿಗೆ ತಲುಪಿಸಲು ಶ್ರಮಿಸಿ- ಪ್ರದೀಪ್ ಎಸ್ .ಹೆಬ್ಬೂರ್ಕರ್

Date:

ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ನೌಕರರು ಕೂಡ ಸಮನ್ವತೆಯನ್ನು ಸಾಧಿಸಿಕೊಂಡು ಕೆಲಸ ನಿರ್ವಹಿಸಬೇಕು ಹಾಗಾದಲ್ಲಿ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಅನುಕೂಲವಾಗುತ್ತದೆ,ಸರ್ಕಾರಿ ಯೋಜನೆಗಳು ಬಡ ಜನರಿಗೆ ಮತ್ತು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಶ್ರಮಿಸಬೇಕು ಎಂದು ಪುರದಾಳು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರದೀಪ್ ಎಸ್ ಹೆಬ್ಬೂರ್ ರವರು ಅಧಿಕಾರಿ ಗಳಿಗೆ ಕರೆ ನೀಡಿದರು. ಪುರದಾಳು ಗ್ರಾಮ ಪಂಚಾಯತ್ ಕಾರ್ಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ರಾಮ ಪಂಚಾಯತ್ ಕೆ ಡಿ ಪಿ ಸಭೆಯ ಅಧ್ಯಕ್ಷತೆವಯಿಸಿ ಮಾತನಾಡಿದರು. ಸಭೆಯಲ್ಲಿ ಅಂಗನವಾಡಿ ಮತ್ತು ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗಿದ್ದು ಗುಣಮಟ್ಟದ ಶಿಕ್ಷಣವನ್ನು ನೀಡಬೇಕು. ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ಸಂಖ್ಯೆ ಹೆಚ್ಚಾಗಿದ್ದು ಈ ಬಗ್ಗೆ ಅಬಕಾರಿ ಮತ್ತು ಪೊಲೀಸ್ ಇಲಾಖೆ ಕಣ್ಣು ಮುಚ್ಚಿ ಕುಳಿತಿದ್ದು ಅಕ್ರಮ ಮಧ್ಯ ಮಾರಾಟ ತಡೆಯಲು ಕ್ರಮವಹಿಸಬೇಕೆಂದು ಕೋರುವ ನಿರ್ಣಯವನ್ನು ಮಾಡಲಾಯಿತು. ಹಾಗೂ ಸಭೆಗೆ ಗೈರಾದ ಅಧಿಕಾರಿಗಳಿಗೆ ಶಿಸ್ತುಕ್ರಮ ವಹಿಸಬೇಕೆಂದು ಸಂಬಂಧಪಟ್ಟ ಇಲಾಖೆಗಳಿಗೆ ಪತ್ರ ವ್ಯವಹಾರ ನಡೆಸಲು ಅಧ್ಯಕ್ಷರು ಸೂಚಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಶ್ರೀ ಎಸ್ ಆರ್ ಗಿರೀಶ್, ಜಿ ರಾಮಣ್ಣ, ಶ್ರೀಮತಿ ಮಾನಸ ಸತೀಶ್, ಶ್ರೀಮತಿ ಕಮಲಾಕ್ಷಿ, ಶ್ರೀಮತಿ ಕುಸುಮ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪರಮೇಶ್ವರ್, ಗ್ರಾಮ ಪಂಚಾಯತ್ ನೋಡಲ್ ಅಧಿಕಾರಿ ಪಶುವೈದ್ಯಾಧಿಕಾರಿ ಮಾದೇವ ಶರ್ಮ, ಹಾಗೂ ಹೋಬಳಿ ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು, ಶಾಲೆಗಳ ಮುಖ್ಯ ಉಪಾಧ್ಯಾಯರು, ಮತ್ತು ಗ್ರಾಮ ಪಂಚಾಯತ್ ಮಟ್ಟದ ನೌಕರವರ್ಗದವರು , ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸ್ವಚ್ಛತಾ ಸಿಬ್ಬಂದಿಗಳು ಕಡ್ಡಾಯವಾಗಿ ಸುರಕ್ಷತಾ ಕವಚಗಳನ್ನು ಧರಿಸಿ ಕಾರ್ಯನಿರ್ವಹಿಸಿ- ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ "ನಗರದ ನೈರ್ಮಲ್ಯ ಹಾಗೂ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ...

B.Y. Raghavendra ಸಿಗಂದೂರು ಸೇತುವೆಗೆ ಒಂದು ವರ್ಷ: ಜನತೆಗೆ ಕನಸು ನನಸಾದ ಹರ್ಷ : ಬಿ.ವೈ.ರಾಘವೇಂದ್ರ

B.Y. Raghavendra ಐತಿಹಾಸಿಕ ಸಿಗಂದೂರು ಚೌಡೇಶ್ವರಿ ಸೇತುವೆ ರಾಷ್ಟ್ರಕ್ಕೆ ಸಮರ್ಪಣೆಯಾಗಿ ಒಂದು...