Friday, September 11, 2026
Friday, September 11, 2026

S.N. Channabasappa ಸ್ವಚ್ಛತಾ ಸಿಬ್ಬಂದಿಗಳು ಕಡ್ಡಾಯವಾಗಿ ಸುರಕ್ಷತಾ ಕವಚಗಳನ್ನು ಧರಿಸಿ ಕಾರ್ಯನಿರ್ವಹಿಸಿ- ಎಸ್.ಎನ್.ಚನ್ನಬಸಪ್ಪ

Date:

S.N. Channabasappa ಶಿವಮೊಗ್ಗ “ನಗರದ ನೈರ್ಮಲ್ಯ ಹಾಗೂ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಪಾತ್ರ ಅತ್ಯಂತ ಹಿರಿದಾಗಿದ್ದು, ಅವರ ಸುರಕ್ಷತೆ, ಉತ್ತಮ ಆರೋಗ್ಯ ಮತ್ತು ಯಾಂತ್ರಿಕೃತ ತರಬೇತಿಗೆ ಸರ್ಕಾರ ಹಾಗೂ ಜಿಲ್ಲಾಡಳಿತವು ವಿಶೇಷ ಆದ್ಯತೆ ನೀಡಿದೆ” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಆಯೋಜಿಸಲಾಗಿದ್ದ ‘ನಮಸ್ತೆ ದಿನಾಚರಣೆ – ೨೦೨೬’ ವಿಶೇಷ ಜಾಗೃತಿ ಅಭಿಯಾನ ಮತ್ತು ಸ್ವಚ್ಛತಾ ಸಿಬ್ಬಂದಿಗಳ ಆರೋಗ್ಯ ಹಾಗೂ ಕಾರ್ಯನಿರ್ವಹಣೆ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

S.N. Channabasappa ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ನಮಸ್ತೆ’ (NAMASTE) ಯೋಜನೆಯಡಿ ಸ್ವಚ್ಛತಾ ಕಾರ್ಯದಲ್ಲಿ ಮಾನವ ಶ್ರಮದ ಜೊತೆಗೆ ಆಧುನಿಕ ಯಂತ್ರೋಪಕರಣಗಳ ಬಳಕೆಯನ್ನು ಹೆಚ್ಚಿಸುವ ಮೂಲಕ ಸಿಬ್ಬಂದಿಗಳ ಸುರಕ್ಷತೆಯನ್ನು ಕಾಯ್ದುಕೊಳ್ಳುವ ವಿಧಾನಗಳ ಕುರಿತು ಈ ಕಾರ್ಯಾಗಾರದಲ್ಲಿ ವಿಸ್ತೃತ ಮಾಹಿತಿ ನೀಡಲಾಯಿತು. ಸಿಬ್ಬಂದಿಗಳು ಕಡ್ಡಾಯವಾಗಿ ಸುರಕ್ಷತಾ ಕವಚಗಳನ್ನು ಧರಿಸಿ ಕಾರ್ಯನಿರ್ವಹಿಸಬೇಕು ಎಂದು ಶಾಸಕರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀ ಮಾಯಣ್ಣ ಗೌಡ, ಪಾಲಿಕೆಯ ಅಧಿಕಾರಿಗಳು ಹಾಗೂ ಪೌರಕಾರ್ಮಿಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...