Friday, July 17, 2026
Friday, July 17, 2026

ಹುಲಿಕಲ್ ಘಾಟ್ ವಿವಿಧ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಿ- ಸಚಿವ ಸತೀಶ್ ಜಾರಕಿಹೊಳಿ

Date:

ಹುಲಿಕಲ್ ಘಾಟ್ ನಲ್ಲಿ ರೂ. 4.35 ಕೋಟಿ ಮತ್ತು ರೂ. 1 ಕೋಟಿ ವೆಚ್ಚದಲ್ಲಿ ತಡೆಗೋಡೆ ಮತ್ತು ಇತರೆ ರಸ್ತೆ ಸುರಕ್ಷತಾ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ತ್ವರಿತ ಮತ್ತು ಗುಣಮಟ್ಟದಿಂದ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆ‌ ಎಂದು
ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ತಿಳಿಸಿದರು.
ಅವರು ಮಂಗಳವಾರ ಸಂಜೆ ಹುಲಿಕಲ್ ಘಾಟ್ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿ ಪ್ರಗತಿಯಲ್ಲಿರುವ ರಿಟೇನಿಂಗ್ ವಾಲ್ (ರಕ್ಷಣಾ ಗೋಡೆ) ನಿರ್ಮಾಣ ಹಾಗೂ ಇತರೆ ರಸ್ತೆ ಕಾಮಗಾರಿಗಳನ್ನು ಖುದ್ದಾಗಿ ವೀಕ್ಷಿಸಿ ಪರಿಶೀಲನೆ ನಡೆಸಿ, ಮಾತನಾಡಿದರು.
ಘಾಟಿಯಲ್ಲಿ ಭಾರೀ ಪ್ರಮಾಣದ ವಾಹನ ಬಿಟ್ಟು ಬೇರೆ ಲಘು ವಾಹನಗಳ ಪ್ರಯಾಣಕ್ಕೆ ಈಗಾಗಲೇ ಅವಕಾಶ ಮಾಡಿಕೊಡಲಾಗಿದೆ.
ಇಲಾಖೆಯಡಿ ಸ್ಥಗಿತಗೊಂಡ ಕಾಮಗಾರಿಗಳಿಗೆ ಚಾಲನೆ ನೀಡಲು ಸೂಚಿಸಿದ್ದೇನೆ.
ಶಿವಮೊಗ್ಗದ ತುಂಗಾ ಸೇತುವೆ ನಿರ್ಮಾಣಕ್ಕೆ ರೂ. ೫೦ ಕೋಟಿ ಮಂಜೂರಾಗಿದ್ದು, ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸದರಿ ಕಾಮಗಾರಿ ಆರಂಭಿಸಲಾಗುವುದು.
ಮಳೆಗಾಲದ ಹಿನ್ನೆಲೆಯಲ್ಲಿ ಘಾಟ್ ಪ್ರದೇಶದಲ್ಲಿ ಭೂಕುಸಿತವಾಗದಂತೆ ತಡೆಯಲು ಮತ್ತು ವಾಹನ ಸವಾರರ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ಕೈಗೊಳ್ಳಲಾಗುತ್ತಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು.
ಕಾಮಗಾರಿ ನಡೆಯುತ್ತಿರುವ ಸ್ಥಳವನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಸಚಿವರು, ಅಲ್ಲಿದ್ದ ಇಂಜಿನಿಯರ್‌ಗಳು ಮತ್ತು ಗುತ್ತಿಗೆದಾರರಿಗೆ
ಘಾಟ್ ರಸ್ತೆಗಳು ಅತ್ಯಂತ ಸೂಕ್ಷ್ಮ ಪ್ರದೇಶಗಳಾಗಿದ್ದರಿಂದ, ರಿಟೇನಿಂಗ್ ವಾಲ್ ನಿರ್ಮಾಣದಲ್ಲಿ ಯಾವುದೇ ಕಾರಣಕ್ಕೂ ಗುಣಮಟ್ಟದ ಕೊರತೆಯಾಗಬಾರದು ಎಂದು ಸೂಚನೆ ನೀಡಿದರು.
ಮಳೆಗಾಲದಲ್ಲಿ ಸಾರ್ವಜನಿಕರ ಹಾಗೂ ವಾಹನ ಸಂಚಾರಕ್ಕೆ ಯಾವುದೇ ವ್ಯತ್ಯಯ ಉಂಟಾಗದಂತೆ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು.
ಸುರಕ್ಷತಾ ಕ್ರಮಗಳು: ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ಫಲಕಗಳು ಹಾಗೂ ರಾತ್ರಿ ವೇಳೆಯಲ್ಲಿ ವಾಹನ ಸವಾರರಿಗೆ ಕಾಣಿಸುವಂತಹ ಸೂಚಕಗಳನ್ನು ಅಳವಡಿಸಬೇಕು.
“ಘಾಟ್ ಪ್ರದೇಶಗಳಲ್ಲಿ ಸಂಚಾರ ಸುರಕ್ಷತೆ ನಮಗೆ ಅತ್ಯಂತ ಪ್ರಮುಖವಾಗಿದೆ. ಮಳೆಗಾಲದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಮತ್ತು ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Aerticle ಚಿನ್ನಕ್ಕಿಂತಲೂ ಚೆನ್ನ, ಚನ್ನಪ್ಪಯ್ಯ ಅವಧೂತರು ...

Klive Special Aerticle ದಾವಣಗೆರೆಯ ಸಮೀಪದ ಆನಗೋಡಿನಿಂದ ಸುಮಾರು 3 ಕಿ.ಮೀ...

ವಾಡಿಕೆಗಿಂತ ಕಡಿಮೆ ಮಳೆ ರೈತರು ಕೃಷಿ ಇಲಾಖೆ ಸೂಚಿಸಿದ ವ್ಯವಸಾಯ ಪದ್ಧತಿ ಅನುಸರಿಸಿ : ಗಿರಿಜಾ ಪಟ್ಟಣಶೆಟ್ಟಿ

ಶಿವಮೊಗ್ಗ ತಾಲ್ಲೂಕಿನಲ್ಲಿ ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂದ ಕಡಿಮೆ ಮಳೆಯಾಗಿರುವುದಲ್ಲದೇ,...