ಶಿವಮೊಗ್ಗ ಜಿಲ್ಲಾ ಬಂಜಾರ ಸಂಘ (ರಿ.) ನೇತೃತ್ವದಲ್ಲಿ, ರಾಯ್ ಸೀನಾ ಫೌಂಡೇಶನ್ ಗೋರಸಿಕವಾಡಿ, ಗೋರ್ಭಾಯಿ ವಿವಿಧೋದ್ದೇಶ ಸಹಕಾರ ಸಂಘ (ನಿ.) ಶಿವಮೊಗ್ಗ ಹಾಗೂ ತಾಲ್ಲೂಕು ಬಂಜಾರ ಸಂಘ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ, 2025–26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇಕಡಾ 80ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಬಂಜಾರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಅಂಕಪಟ್ಟಿಯ ನಕಲು, ಜಾತಿ ಪ್ರಮಾಣ ಪತ್ರ, ಇತ್ತೀಚಿನ ಎರಡು ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ನ ನಕಲು ಪ್ರತಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 22, 2026 ಆಗಿದ್ದು, ಅರ್ಜಿಗಳನ್ನು ಶಿವಮೊಗ್ಗ ಜಿಲ್ಲಾ ಬಂಜಾರ ಸಂಘ (ರಿ.), ಬಂಜಾರ ಕನ್ವೆನ್ಷನ್ ಹಾಲ್, ಬಾಲರಾಜ ಅರಸ್ ರಸ್ತೆ, ಕೋರ್ಟ್ ಮುಂಭಾಗ, ಶಿವಮೊಗ್ಗ ವಿಳಾಸಕ್ಕೆ ಸಲ್ಲಿಸುವಂತೆ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಮನವಿ ಮಾಡಲಾಗಿದೆ.
